Homeಕರ್ನಾಟಕಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಕರ್ನಾಟಕದಾದ್ಯಂತ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿ ಖಜಾಂಜಿ ಹುದ್ದೆ ಮತ್ತು ಒಟ್ಟು ಹುದ್ದೆಗಳಲ್ಲಿ ಶೇ.30ರಷ್ಟು ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ (ಮಾ.24) ಆದೇಶಿಸಿದೆ.

ಬೆಂಗಳೂರಿನ ವಕೀಲರ ಸಂಘದ (ಎಎಬಿ) ಪ್ರಕರಣದಲ್ಲಿ ನೀಡಲಾದ ನಿರ್ದೇಶನವು ಕರ್ನಾಟಕದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಇಂತಹ ನಿರ್ದೇಶನ ನೀಡಿತ್ತು. ಅಲ್ಲದೆ, ಈ ವರ್ಷದ ಜನವರಿ 24 ರಂದು ಹೊರಡಿಸಿದ ಆದೇಶದಲ್ಲಿ, ಖಜಾಂಚಿ (ಕೋಶಾಧಿಕಾರಿ) ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆಂದೇ ಮೀಸಲಿಡಬೇಕೆಂದು ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಎಬಿ ಚುನಾವಣೆ ನಡೆದಿರುವ ಬಗ್ಗೆ ಎರಡು ದಿನಗಳ ಹಿಂದೆ ಪೀಠದ ಗಮನಕ್ಕೆ ತರಲಾಗಿತ್ತು. ಜನವರಿ 28ರಂದು ಎಎಬಿ ಆಡಳಿತ ಮಂಡಳಿಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಮೀಸಲಾತಿ ಜಾರಿಗೆ ತಂದಿರುವುದಾಗಿ ತಿಳಿಸಲಾಗಿತ್ತು.

ರಾಜ್ಯದ ಎಲ್ಲಾ ವಕೀಲರ ಸಂಘಗಳ ಚುನಾವಣೆಗಳಲ್ಲಿ ಮಹಿಳಾ ವಕೀಲರಿಗೆ ಶೇಖಡ 30ರಷ್ಟು ಮೀಸಲಾತಿ ನಿಗದಿಪಡಿಸಿ ನಿರ್ದೇಶನ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

ವಿವಿಧ ಜಿಲ್ಲಾ ವಕೀಲರ ಸಂಘಗಳಿಗೆ ಚುನಾವಣೆಗಳು ಬಾಕಿ ಉಳಿದಿರುವುದನ್ನು ಗಮನಿಸಿದ ನ್ಯಾಯಾಲಯ, ಎಎಬಿಗೆ ನೀಡಿದ್ದ ಮಹಿಳಾ ಮೀಸಲಾತಿಯ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘದ ಚುನಾವಣೆಗಳಿಗೂ ಅನ್ವಯಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಎಲ್ಲಾ ಜಿಲ್ಲಾ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ ಖಜಾಂಚಿ ಹುದ್ದೆ ಮತ್ತು ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿ ಹುದ್ದೆಗಳ ಶೇಖಡ 30ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ನಿರ್ದೇಶಿಸಿದೆ.

ಎಎಬಿಯಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಕೂಡ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.

ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ​​(ಟಿಬಿಎ) ಮಹಿಳಾ ವಕೀಲರಿಗೆ ಶೇ. 33ರಷ್ಟು ಮೀಸಲಾತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಏಪ್ರಿಲ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಜಂಟಿ ಕಾರ್ಯದರ್ಶಿ ಹುದ್ದೆ ಮತ್ತು ಎರಡು ಕಾರ್ಯಕಾರಿ ಮಂಡಳಿ ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಸಂಘ ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನಂತರ ಆದೇಶ ಹೊರಡಿಸಿದೆ.

ಮುಂಬರುವ ಚುನಾವಣೆಗಳು ಪೂರ್ಣಗೊಂಡ ನಂತರ ಈ ಬದಲಾವಣೆಗಳನ್ನು ಅಳವಡಿಸಲು ಸಂಘದ ಬೈಲಾಗಳನ್ನು ಸಹ ತಿದ್ದುಪಡಿ ಮಾಡಲಾಗುವುದು ಎಂದು ಟಿಬಿಎ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಆದೇಶ ನೀಡುವ ವೇಳೆ, ಈಗ ಮೀಸಲಾತಿ ಜಾರಿ ಮಾಡಲಿಲ್ಲ ಎಂದರೆ ಯಾವಾಗ ಮಾಡುವಿರಿ? ಎಂದು ಪ್ರಶ್ನಿಸಿದ್ದ ನ್ಯಾ. ನಾಗಪ್ರಸನ್ನ ಅವರು “ವಕೀಲರ ಸಂಘಗಳನ್ನು ಬಾಯ್ಸ್‌ ಕ್ಲಬ್‌ ಆಗಿರಲು ಬಿಡಲಾಗದು” ಎಂದಿದ್ದರು.

ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಖಜಾಂಜಿ ಹುದ್ದೆ ಮತ್ತು ಶೇಖಡ 33ರಷ್ಟು ಮೀಸಲಾತಿ ನೀಡುವಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘಗಳಿಗೆ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೂಲ ಅರ್ಜಿಯಲ್ಲಿ ಕೋರಲಾಗಿತ್ತು. ಮಹಿಳಾ ವಕೀಲರಿಗೆ ಮೀಸಲಾತಿ ನೀಡುವಲ್ಲಿ ಯಾವುದೇ ಕಾನೂನು ಅಡಚಣೆ ಇಲ್ಲ ಎಂದು ಹೇಳಲಾಗತ್ತು.

ದೆಹಲಿ ಮಾರಾಟ ತೆರಿಗೆ ವಕೀಲರ ಸಂಘ ​​ಮತ್ತು ದೆಹಲಿ ತೆರಿಗೆ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಖಜಾಂಚಿ ಹುದ್ದೆ ಮತ್ತು ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಸ್ಥಾನಗಳನ್ನು ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಕೀಲರ ಸಂಘದ ​​ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಬೇಕು ಎಂದು ಈ ವರ್ಷದ ಜನವರಿ 20ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ದೆಹಲಿ ಹೈಕೋರ್ಟ್ ವಕೀಲರ ಸಂಘದ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಮೂರು ಹುದ್ದೆಗಳನ್ನು ಕಾಯ್ದಿರಿಸುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಜಿಲ್ಲಾ ವಕೀಲರ ​ಸಂಘಗಳ ​ಚುನಾವಣೆಯಲ್ಲಿ, ಖಜಾಂಚಿ ಹುದ್ದೆ ಮತ್ತು ಇತರ ಕಾರ್ಯಕಾರಿ ಸಮಿತಿ ಹುದ್ದೆಗಳಲ್ಲಿ ಶೇ. 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ (ಈಗಾಗಲೇ ಮಹಿಳೆಯರಿಗೆ ಮೀಸಲಿಟ್ಟ ಹುದ್ದೆಗಳನ್ನು ಒಳಗೊಂಡಂತೆ) ಮೀಸಲಿಡಬೇಕು ಎಂದು ಹೇಳಿತ್ತು.

ಕಳೆದ ವರ್ಷ ಸೆಪ್ಟೆಂಬರ್ 26 ರಂದು, ಸುಪ್ರೀಂ ಕೋರ್ಟ್ DHCBA ಗೆ ಐದು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಮತ್ತೊಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ನಿರ್ದೇಶನ ನೀಡಿತು.

ಐವರು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಒಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ವಕೀಲರ ಸಂಘಕ್ಕೆ ನಿರ್ದೇಶನ ನೀಡಿತ್ತು.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...