Homeಕರ್ನಾಟಕಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ನ್ಯಾಯವಾದಿಗಳಿಗೆ ಶೇ.30ರಷ್ಟು ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಕರ್ನಾಟಕದಾದ್ಯಂತ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿ ಖಜಾಂಜಿ ಹುದ್ದೆ ಮತ್ತು ಒಟ್ಟು ಹುದ್ದೆಗಳಲ್ಲಿ ಶೇ.30ರಷ್ಟು ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ (ಮಾ.24) ಆದೇಶಿಸಿದೆ.

ಬೆಂಗಳೂರಿನ ವಕೀಲರ ಸಂಘದ (ಎಎಬಿ) ಪ್ರಕರಣದಲ್ಲಿ ನೀಡಲಾದ ನಿರ್ದೇಶನವು ಕರ್ನಾಟಕದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ಬೆಂಗಳೂರು ವಕೀಲರ ಸಂಘದ (ಎಎಬಿ) ಚುನಾವಣೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಇಂತಹ ನಿರ್ದೇಶನ ನೀಡಿತ್ತು. ಅಲ್ಲದೆ, ಈ ವರ್ಷದ ಜನವರಿ 24 ರಂದು ಹೊರಡಿಸಿದ ಆದೇಶದಲ್ಲಿ, ಖಜಾಂಚಿ (ಕೋಶಾಧಿಕಾರಿ) ಹುದ್ದೆಯನ್ನು ಮಹಿಳಾ ಅಭ್ಯರ್ಥಿಗಳಿಗೆಂದೇ ಮೀಸಲಿಡಬೇಕೆಂದು ಸೂಚಿಸಿತ್ತು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಎಎಬಿ ಚುನಾವಣೆ ನಡೆದಿರುವ ಬಗ್ಗೆ ಎರಡು ದಿನಗಳ ಹಿಂದೆ ಪೀಠದ ಗಮನಕ್ಕೆ ತರಲಾಗಿತ್ತು. ಜನವರಿ 28ರಂದು ಎಎಬಿ ಆಡಳಿತ ಮಂಡಳಿಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಮೀಸಲಾತಿ ಜಾರಿಗೆ ತಂದಿರುವುದಾಗಿ ತಿಳಿಸಲಾಗಿತ್ತು.

ರಾಜ್ಯದ ಎಲ್ಲಾ ವಕೀಲರ ಸಂಘಗಳ ಚುನಾವಣೆಗಳಲ್ಲಿ ಮಹಿಳಾ ವಕೀಲರಿಗೆ ಶೇಖಡ 30ರಷ್ಟು ಮೀಸಲಾತಿ ನಿಗದಿಪಡಿಸಿ ನಿರ್ದೇಶನ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

ವಿವಿಧ ಜಿಲ್ಲಾ ವಕೀಲರ ಸಂಘಗಳಿಗೆ ಚುನಾವಣೆಗಳು ಬಾಕಿ ಉಳಿದಿರುವುದನ್ನು ಗಮನಿಸಿದ ನ್ಯಾಯಾಲಯ, ಎಎಬಿಗೆ ನೀಡಿದ್ದ ಮಹಿಳಾ ಮೀಸಲಾತಿಯ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘದ ಚುನಾವಣೆಗಳಿಗೂ ಅನ್ವಯಿಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಕರ್ನಾಟಕದ ಎಲ್ಲಾ ಜಿಲ್ಲಾ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ ಖಜಾಂಚಿ ಹುದ್ದೆ ಮತ್ತು ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿ ಹುದ್ದೆಗಳ ಶೇಖಡ 30ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ನಿರ್ದೇಶಿಸಿದೆ.

ಎಎಬಿಯಂತೆ ರಾಜ್ಯದ ಎಲ್ಲಾ ವಕೀಲರ ಸಂಘಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಕೂಡ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿತ್ತು.

ತುಮಕೂರು ಜಿಲ್ಲಾ ವಕೀಲರ ಸಂಘದಲ್ಲಿ ​​(ಟಿಬಿಎ) ಮಹಿಳಾ ವಕೀಲರಿಗೆ ಶೇ. 33ರಷ್ಟು ಮೀಸಲಾತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಏಪ್ರಿಲ್ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಜಂಟಿ ಕಾರ್ಯದರ್ಶಿ ಹುದ್ದೆ ಮತ್ತು ಎರಡು ಕಾರ್ಯಕಾರಿ ಮಂಡಳಿ ಹುದ್ದೆಗಳನ್ನು ಕಾಯ್ದಿರಿಸುವುದಾಗಿ ಸಂಘ ನೀಡಿದ ಭರವಸೆಯನ್ನು ದಾಖಲಿಸಿಕೊಂಡ ನಂತರ ಆದೇಶ ಹೊರಡಿಸಿದೆ.

ಮುಂಬರುವ ಚುನಾವಣೆಗಳು ಪೂರ್ಣಗೊಂಡ ನಂತರ ಈ ಬದಲಾವಣೆಗಳನ್ನು ಅಳವಡಿಸಲು ಸಂಘದ ಬೈಲಾಗಳನ್ನು ಸಹ ತಿದ್ದುಪಡಿ ಮಾಡಲಾಗುವುದು ಎಂದು ಟಿಬಿಎ ಪರ ವಕೀಲರು ಹೈಕೋರ್ಟ್‌ಗೆ ಹೇಳಿದ್ದಾರೆ.

ಆದೇಶ ನೀಡುವ ವೇಳೆ, ಈಗ ಮೀಸಲಾತಿ ಜಾರಿ ಮಾಡಲಿಲ್ಲ ಎಂದರೆ ಯಾವಾಗ ಮಾಡುವಿರಿ? ಎಂದು ಪ್ರಶ್ನಿಸಿದ್ದ ನ್ಯಾ. ನಾಗಪ್ರಸನ್ನ ಅವರು “ವಕೀಲರ ಸಂಘಗಳನ್ನು ಬಾಯ್ಸ್‌ ಕ್ಲಬ್‌ ಆಗಿರಲು ಬಿಡಲಾಗದು” ಎಂದಿದ್ದರು.

ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ ಖಜಾಂಜಿ ಹುದ್ದೆ ಮತ್ತು ಶೇಖಡ 33ರಷ್ಟು ಮೀಸಲಾತಿ ನೀಡುವಂತೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ನಿರ್ದೇಶನಗಳನ್ನು ಕರ್ನಾಟಕದ ಎಲ್ಲಾ ವಕೀಲರ ಸಂಘಗಳಿಗೆ ನೀಡುವಂತೆ ಬೆಂಗಳೂರಿನ ಮಹಿಳಾ ವಕೀಲರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೂಲ ಅರ್ಜಿಯಲ್ಲಿ ಕೋರಲಾಗಿತ್ತು. ಮಹಿಳಾ ವಕೀಲರಿಗೆ ಮೀಸಲಾತಿ ನೀಡುವಲ್ಲಿ ಯಾವುದೇ ಕಾನೂನು ಅಡಚಣೆ ಇಲ್ಲ ಎಂದು ಹೇಳಲಾಗತ್ತು.

ದೆಹಲಿ ಮಾರಾಟ ತೆರಿಗೆ ವಕೀಲರ ಸಂಘ ​​ಮತ್ತು ದೆಹಲಿ ತೆರಿಗೆ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿಯಲ್ಲಿ ಖಜಾಂಚಿ ಹುದ್ದೆ ಮತ್ತು ಮಹಿಳಾ ವಕೀಲರಿಗೆ ಶೇಕಡಾ 30ರಷ್ಟು ಸ್ಥಾನಗಳನ್ನು ಕಾಯ್ದಿರಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಕೀಲರ ಸಂಘದ ​​ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಬೇಕು ಎಂದು ಈ ವರ್ಷದ ಜನವರಿ 20ರಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು.

ದೆಹಲಿ ಹೈಕೋರ್ಟ್ ವಕೀಲರ ಸಂಘದ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಮೂರು ಹುದ್ದೆಗಳನ್ನು ಕಾಯ್ದಿರಿಸುವಂತೆ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಜಿಲ್ಲಾ ವಕೀಲರ ​ಸಂಘಗಳ ​ಚುನಾವಣೆಯಲ್ಲಿ, ಖಜಾಂಚಿ ಹುದ್ದೆ ಮತ್ತು ಇತರ ಕಾರ್ಯಕಾರಿ ಸಮಿತಿ ಹುದ್ದೆಗಳಲ್ಲಿ ಶೇ. 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ (ಈಗಾಗಲೇ ಮಹಿಳೆಯರಿಗೆ ಮೀಸಲಿಟ್ಟ ಹುದ್ದೆಗಳನ್ನು ಒಳಗೊಂಡಂತೆ) ಮೀಸಲಿಡಬೇಕು ಎಂದು ಹೇಳಿತ್ತು.

ಕಳೆದ ವರ್ಷ ಸೆಪ್ಟೆಂಬರ್ 26 ರಂದು, ಸುಪ್ರೀಂ ಕೋರ್ಟ್ DHCBA ಗೆ ಐದು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಮತ್ತೊಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ನಿರ್ದೇಶನ ನೀಡಿತು.

ಐವರು ಸದಸ್ಯರ ಸಂಘದ ಪದಾಧಿಕಾರಿಗಳ ಮಂಡಳಿಯಲ್ಲಿ ಒಂದು ಹುದ್ದೆಯ ಜೊತೆಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡುವಂತೆ ಕಳೆದ ವರ್ಷದ ಸೆಪ್ಟೆಂಬರ್ 26 ರಂದು ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ವಕೀಲರ ಸಂಘಕ್ಕೆ ನಿರ್ದೇಶನ ನೀಡಿತ್ತು.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಬಸವರಾಜ ಹೊರಟ್ಟಿ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...