Homeಮುಖಪುಟರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ ಸ್ಥಾನಗಳನ್ನು ಚುನಾವಣೆಯ ಮೂಲಕ ಮತ್ತು ಉಳಿದ 10ರಷ್ಟು ಸ್ಥಾನಗಳನ್ನು ಸಹ ನಾಮನಿರ್ದೇಶನದ (co-option) ಮೂಲಕ ಭರ್ತಿ ಮಾಡಬೇಕು. ಈಗಾಗಲೇ ಚುನಾವಣೆ ನಡೆದಿರುವ ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಿದ್ದರೆ, ಅಲ್ಲಿಗೆ ನಾಮನಿರ್ದೇಶನದ ಮೂಲಕ ಮಹಿಳೆಯರ ಸಂಖ್ಯೆ ಹೆಚ್ಚಿಸುವ ಪ್ರಸ್ತಾವನೆಯನ್ನು ನ್ಯಾಯಾಲಯದ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಆರು ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರಿಗಾಗಿ ಸ್ಥಾನಗಳನ್ನು ಮೀಸಲಿಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಆರು ಬಾರ್ ಕೌನ್ಸಿಲ್‌ಗಳಲ್ಲಿ (ಆಂಧ್ರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಬಿಹಾರ, ಛತ್ತೀಸ್‌ಗಢ) ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ, ಅಲ್ಲಿ ಮಹಿಳಾ ಮೀಸಲಾತಿಯನ್ನು ಈ ಬಾರಿ ಜಾರಿಗೊಳಿಸುವುದಿಲ್ಲ. ಆದರೆ, ಮಹಿಳಾ ಅಭ್ಯರ್ಥಿಗಳು ಧೈರ್ಯದಿಂದ ಚುನಾವಣೆಗೆ ಸ್ಪರ್ಧಿಸಲಿ ಮತ್ತು ವಕೀಲ ಮತದಾರರು ತಾವಾಗೇ ಮಹಿಳೆಯರಿಗೆ ಒಳ್ಳೆಯ ಪ್ರಾತಿನಿಧ್ಯ ಕೊಡಲು ಶ್ರಮಿಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉಳಿದ ಬಾರ್ ಕೌನ್ಸಿಲ್‌ಗಳ (ಅಂದರೆ ಚುನಾವಣೆ ಇನ್ನೂ ಆರಂಭವಾಗದೇ ಇರುವ ಎಲ್ಲ ಬಾರ್ ಕೌನ್ಸಿಲ್‌ಗಳು), ಒಟ್ಟು ಸದಸ್ಯ ಸ್ಥಾನಗಳ ಪೈಕಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ಕಡ್ಡಾಯವಾಗಿ ಇರಬೇಕು. ಇದರಲ್ಲಿ ಶೇಕಡ 20ರಷ್ಟು ಸ್ಥಾನಗಳನ್ನು ಚುನಾವಣೆಯ ಮೂಲಕ ಭರ್ತಿ ಮಾಡಬೇಕು. ಉಳಿದ ಶೇಕಡ 10ರಷ್ಟು ಸ್ಥಾನಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿಗೊಳಿಸಬೇಕು. ಸಹ-ನಾಮನಿರ್ದೇಶನ ಮಾಡುವ ಪ್ರಸ್ತಾಪವನ್ನು ನ್ಯಾಯಾಲಯದ ಮುಂದೆ ಇಡಬೇಕು (ನ್ಯಾಯಾಲಯದ ಅನುಮೋದನೆ ಪಡೆಯಬೇಕು) ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಒಂದು ವೇಳೆ ಯಾವುದಾದರೂ ಬಾರ್ ಕೌನ್ಸಿಲ್‌ನಲ್ಲಿ ಮಹಿಳಾ ವಕೀಲರು ಶೇಕಡ 30ರಷ್ಟು ಸ್ಥಾನಗಳಿಗೆ ಸ್ಪರ್ಧಿಸಲು ಮುಂದೆ ಬಾರದಿದ್ದರೂ ಸಹ, ಅಂತಹ ಸ್ಥಳಗಳಲ್ಲಿಯೂ ಸಹ-ನಾಮನಿರ್ದೇಶನದ ಮೂಲಕ ಮಹಿಳೆಯರನ್ನು ಸೇರಿಸಿ, ಅಂತಿಮವಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ದೊರೆಯುವಂತೆ ಮಾಡಬೇಕು ಎಂದು ಹೇಳಿದೆ.

ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳಾ ಮೀಸಲಾತಿ ಕೋರಿ ಯೋಗಮಾಯ ಎಂ.ಜಿ ಮತ್ತು ಶೆಹ್ಲಾ ಚೌಧರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಈ ಆದೇಶ ನೀಡಿದೆ.

ಕಳೆದ ವಾರ, ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30 ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಭಾರತೀಯ ಬಾರ್ ಕೌನ್ಸಿಲ್‌ಗೆ (ಬಿಸಿಐ) ತಿಳಿಸಿತ್ತು. ಇಂದು ಪ್ರಸ್ತಾವನೆಯೊಂದಿಗೆ ಬರುವಂತೆ ನ್ಯಾಯಾಲಯವು ಬಿಸಿಐಗೆ ಸೂಚಿಸಿತ್ತು.

ಬಿಸಿಐ ತಾತ್ವಿಕವಾಗಿ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಕನಿಷ್ಠ ಶೇಕಡ 30ರಷ್ಟು ಮಹಿಳಾ ಮೀಸಲಾತಿ ಇರಬೇಕು ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಪ್ರಸ್ತಕ್ತ ವರ್ಷಕ್ಕೆ, ಬಾರ್ ಕೌನ್ಸಿಲ್‌ಗಳು ಮಹಿಳಾ ಅಭ್ಯರ್ಥಿಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿ ಮಾಡಲು ಅನುಮತಿ ನೀಡಬೇಕು. ಮಹಿಳಾ ಸದಸ್ಯರ ಸಹ-ನಾಮನಿರ್ದೇಶನದ ಮೂಲಕ ಶೇಕಡ 15ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಅವಕಾಶ ಕೊಡಬೇಕು ಎಂದು ಹಿರಿಯ ವಕೀಲ ಹಾಗೂ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದಾಗ್ಯೂ, ಸಹ-ನಾಮನಿರ್ದೇಶನದ ಮೂಲಕ ಶೇಕಡ 10ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಮಾತ್ರ ನ್ಯಾಯಾಲಯ ಅವಕಾಶ ನೀಡಿದೆ.

ಎಲ್ಲಾ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲೂ ಒಂದೇ ರೀತಿಯಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಮೀಸಲಾತಿ ಕಡ್ಡಾಯಗೊಳಿಸುವ ಒಟ್ಟು ಆದೇಶ (blanket order) ಸಮಂಜಸವಲ್ಲ. ಏಕೆಂದರೆ, ಅನೇಕ ರಾಜ್ಯಗಳಲ್ಲಿ ವೃತ್ತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಮಹಿಳಾ ವಕೀಲರ ಸಂಖ್ಯೆ ಅತ್ಯಂತ ಕಡಿಮೆಯಿದೆ (ಕೆಲವು ರಾಜ್ಯಗಳಲ್ಲಿ ಶೇಕಡ 5-10ಕ್ಕಿಂತಲೂ ಕಡಿಮೆ). ಅಂತಹ ರಾಜ್ಯಗಳಲ್ಲಿ ಶೇಕಡ 30ರಷ್ಟು ಮೀಸಲಾತಿ ತುಂಬುವುದು ಕಷ್ಟಸಾಧ್ಯ ಮತ್ತು ವಾಸ್ತವಿಕವಲ್ಲ ಎಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ವಾದಿಸಿದರು.

ಅರ್ಜಿದಾರರಾದ ಯೋಗಮಾಯ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ ಮತ್ತು ಶ್ರೀರಾಮ್ ಪರಕ್ಕಟ್ ಅವರು ವಾದ ಮಂಡಿಸಿದರು. ಇತರ ಅರ್ಜಿದಾರರಾದ ಶೆಹ್ಲಾ ಚೌಧರಿ ಪರ ವಕೀಲ ಡಾ.ಚಾರು ಮಾಥುರ್ ವಾದ ಮಂಡಿಸಿದರು.

ತಮಿಳುನಾಡು ಬಾರ್ ಕೌನ್ಸಿಲ್‌ನ ಸಹ-ಅಧ್ಯಕ್ಷ ಕೆ. ಬಾಲು ಅವರು ಕರುಣಾಕರನ್ ಎಒಆರ್ ಮೂಲಕ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಶೇಕಡ 30ರಷ್ಟು ಪ್ರಾತಿನಿಧ್ಯವನ್ನು ಬೆಂಬಲಿಸಲಾಗಿತ್ತು. ಬಾಲು ಪರ ಹಾಜರಾದ ಹಿರಿಯ ವಕೀಲರು “ಒಮ್ಮೆ ಅಧ್ಯಕ್ಷರಾದವರು ಯಾವಾಗಲೂ ಅಧ್ಯಕ್ಷ” ಎಂಬ ಪರಿಸ್ಥಿತಿ ಇದೆ. ಅದನ್ನು ಬದಲಾಯಿಸಬೇಕಾಗಿದೆ ಎಂದು ಕೋರಿದ್ದರು.

ವಕೀಲರ ಪರವಾಗಿ ಕೆಲಸ ಮಾಡುವ ವಕೀಲರ ಸರ್ಕಾರೇತರ ಸಂಸ್ಥೆಯಾದ ಜನ ಅದಾಲತ್ ಪರವಾಗಿ ಹಿರಿಯ ವಕೀಲ ವಿನಯ್ ನವರೆ ಹಾಜರಾಗಿದ್ದರು. ಈ ಸಂಸ್ಥೆ ಕೂಡ ಮಧ್ಯಪ್ರವೇಶ ಅರ್ಜಿಯನ್ನು ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...