Homeಮುಖಪುಟರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ ಸ್ಥಾನಗಳನ್ನು ಚುನಾವಣೆಯ ಮೂಲಕ ಮತ್ತು ಉಳಿದ 10ರಷ್ಟು ಸ್ಥಾನಗಳನ್ನು ಸಹ ನಾಮನಿರ್ದೇಶನದ (co-option) ಮೂಲಕ ಭರ್ತಿ ಮಾಡಬೇಕು. ಈಗಾಗಲೇ ಚುನಾವಣೆ ನಡೆದಿರುವ ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಿದ್ದರೆ, ಅಲ್ಲಿಗೆ ನಾಮನಿರ್ದೇಶನದ ಮೂಲಕ ಮಹಿಳೆಯರ ಸಂಖ್ಯೆ ಹೆಚ್ಚಿಸುವ ಪ್ರಸ್ತಾವನೆಯನ್ನು ನ್ಯಾಯಾಲಯದ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಆರು ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರಿಗಾಗಿ ಸ್ಥಾನಗಳನ್ನು ಮೀಸಲಿಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಆರು ಬಾರ್ ಕೌನ್ಸಿಲ್‌ಗಳಲ್ಲಿ (ಆಂಧ್ರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಬಿಹಾರ, ಛತ್ತೀಸ್‌ಗಢ) ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ, ಅಲ್ಲಿ ಮಹಿಳಾ ಮೀಸಲಾತಿಯನ್ನು ಈ ಬಾರಿ ಜಾರಿಗೊಳಿಸುವುದಿಲ್ಲ. ಆದರೆ, ಮಹಿಳಾ ಅಭ್ಯರ್ಥಿಗಳು ಧೈರ್ಯದಿಂದ ಚುನಾವಣೆಗೆ ಸ್ಪರ್ಧಿಸಲಿ ಮತ್ತು ವಕೀಲ ಮತದಾರರು ತಾವಾಗೇ ಮಹಿಳೆಯರಿಗೆ ಒಳ್ಳೆಯ ಪ್ರಾತಿನಿಧ್ಯ ಕೊಡಲು ಶ್ರಮಿಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉಳಿದ ಬಾರ್ ಕೌನ್ಸಿಲ್‌ಗಳ (ಅಂದರೆ ಚುನಾವಣೆ ಇನ್ನೂ ಆರಂಭವಾಗದೇ ಇರುವ ಎಲ್ಲ ಬಾರ್ ಕೌನ್ಸಿಲ್‌ಗಳು), ಒಟ್ಟು ಸದಸ್ಯ ಸ್ಥಾನಗಳ ಪೈಕಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ಕಡ್ಡಾಯವಾಗಿ ಇರಬೇಕು. ಇದರಲ್ಲಿ ಶೇಕಡ 20ರಷ್ಟು ಸ್ಥಾನಗಳನ್ನು ಚುನಾವಣೆಯ ಮೂಲಕ ಭರ್ತಿ ಮಾಡಬೇಕು. ಉಳಿದ ಶೇಕಡ 10ರಷ್ಟು ಸ್ಥಾನಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿಗೊಳಿಸಬೇಕು. ಸಹ-ನಾಮನಿರ್ದೇಶನ ಮಾಡುವ ಪ್ರಸ್ತಾಪವನ್ನು ನ್ಯಾಯಾಲಯದ ಮುಂದೆ ಇಡಬೇಕು (ನ್ಯಾಯಾಲಯದ ಅನುಮೋದನೆ ಪಡೆಯಬೇಕು) ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಒಂದು ವೇಳೆ ಯಾವುದಾದರೂ ಬಾರ್ ಕೌನ್ಸಿಲ್‌ನಲ್ಲಿ ಮಹಿಳಾ ವಕೀಲರು ಶೇಕಡ 30ರಷ್ಟು ಸ್ಥಾನಗಳಿಗೆ ಸ್ಪರ್ಧಿಸಲು ಮುಂದೆ ಬಾರದಿದ್ದರೂ ಸಹ, ಅಂತಹ ಸ್ಥಳಗಳಲ್ಲಿಯೂ ಸಹ-ನಾಮನಿರ್ದೇಶನದ ಮೂಲಕ ಮಹಿಳೆಯರನ್ನು ಸೇರಿಸಿ, ಅಂತಿಮವಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ದೊರೆಯುವಂತೆ ಮಾಡಬೇಕು ಎಂದು ಹೇಳಿದೆ.

ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳಾ ಮೀಸಲಾತಿ ಕೋರಿ ಯೋಗಮಾಯ ಎಂ.ಜಿ ಮತ್ತು ಶೆಹ್ಲಾ ಚೌಧರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಈ ಆದೇಶ ನೀಡಿದೆ.

ಕಳೆದ ವಾರ, ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30 ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಭಾರತೀಯ ಬಾರ್ ಕೌನ್ಸಿಲ್‌ಗೆ (ಬಿಸಿಐ) ತಿಳಿಸಿತ್ತು. ಇಂದು ಪ್ರಸ್ತಾವನೆಯೊಂದಿಗೆ ಬರುವಂತೆ ನ್ಯಾಯಾಲಯವು ಬಿಸಿಐಗೆ ಸೂಚಿಸಿತ್ತು.

ಬಿಸಿಐ ತಾತ್ವಿಕವಾಗಿ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಕನಿಷ್ಠ ಶೇಕಡ 30ರಷ್ಟು ಮಹಿಳಾ ಮೀಸಲಾತಿ ಇರಬೇಕು ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಪ್ರಸ್ತಕ್ತ ವರ್ಷಕ್ಕೆ, ಬಾರ್ ಕೌನ್ಸಿಲ್‌ಗಳು ಮಹಿಳಾ ಅಭ್ಯರ್ಥಿಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿ ಮಾಡಲು ಅನುಮತಿ ನೀಡಬೇಕು. ಮಹಿಳಾ ಸದಸ್ಯರ ಸಹ-ನಾಮನಿರ್ದೇಶನದ ಮೂಲಕ ಶೇಕಡ 15ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಅವಕಾಶ ಕೊಡಬೇಕು ಎಂದು ಹಿರಿಯ ವಕೀಲ ಹಾಗೂ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದಾಗ್ಯೂ, ಸಹ-ನಾಮನಿರ್ದೇಶನದ ಮೂಲಕ ಶೇಕಡ 10ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಮಾತ್ರ ನ್ಯಾಯಾಲಯ ಅವಕಾಶ ನೀಡಿದೆ.

ಎಲ್ಲಾ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲೂ ಒಂದೇ ರೀತಿಯಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಮೀಸಲಾತಿ ಕಡ್ಡಾಯಗೊಳಿಸುವ ಒಟ್ಟು ಆದೇಶ (blanket order) ಸಮಂಜಸವಲ್ಲ. ಏಕೆಂದರೆ, ಅನೇಕ ರಾಜ್ಯಗಳಲ್ಲಿ ವೃತ್ತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಮಹಿಳಾ ವಕೀಲರ ಸಂಖ್ಯೆ ಅತ್ಯಂತ ಕಡಿಮೆಯಿದೆ (ಕೆಲವು ರಾಜ್ಯಗಳಲ್ಲಿ ಶೇಕಡ 5-10ಕ್ಕಿಂತಲೂ ಕಡಿಮೆ). ಅಂತಹ ರಾಜ್ಯಗಳಲ್ಲಿ ಶೇಕಡ 30ರಷ್ಟು ಮೀಸಲಾತಿ ತುಂಬುವುದು ಕಷ್ಟಸಾಧ್ಯ ಮತ್ತು ವಾಸ್ತವಿಕವಲ್ಲ ಎಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ವಾದಿಸಿದರು.

ಅರ್ಜಿದಾರರಾದ ಯೋಗಮಾಯ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ ಮತ್ತು ಶ್ರೀರಾಮ್ ಪರಕ್ಕಟ್ ಅವರು ವಾದ ಮಂಡಿಸಿದರು. ಇತರ ಅರ್ಜಿದಾರರಾದ ಶೆಹ್ಲಾ ಚೌಧರಿ ಪರ ವಕೀಲ ಡಾ.ಚಾರು ಮಾಥುರ್ ವಾದ ಮಂಡಿಸಿದರು.

ತಮಿಳುನಾಡು ಬಾರ್ ಕೌನ್ಸಿಲ್‌ನ ಸಹ-ಅಧ್ಯಕ್ಷ ಕೆ. ಬಾಲು ಅವರು ಕರುಣಾಕರನ್ ಎಒಆರ್ ಮೂಲಕ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಶೇಕಡ 30ರಷ್ಟು ಪ್ರಾತಿನಿಧ್ಯವನ್ನು ಬೆಂಬಲಿಸಲಾಗಿತ್ತು. ಬಾಲು ಪರ ಹಾಜರಾದ ಹಿರಿಯ ವಕೀಲರು “ಒಮ್ಮೆ ಅಧ್ಯಕ್ಷರಾದವರು ಯಾವಾಗಲೂ ಅಧ್ಯಕ್ಷ” ಎಂಬ ಪರಿಸ್ಥಿತಿ ಇದೆ. ಅದನ್ನು ಬದಲಾಯಿಸಬೇಕಾಗಿದೆ ಎಂದು ಕೋರಿದ್ದರು.

ವಕೀಲರ ಪರವಾಗಿ ಕೆಲಸ ಮಾಡುವ ವಕೀಲರ ಸರ್ಕಾರೇತರ ಸಂಸ್ಥೆಯಾದ ಜನ ಅದಾಲತ್ ಪರವಾಗಿ ಹಿರಿಯ ವಕೀಲ ವಿನಯ್ ನವರೆ ಹಾಜರಾಗಿದ್ದರು. ಈ ಸಂಸ್ಥೆ ಕೂಡ ಮಧ್ಯಪ್ರವೇಶ ಅರ್ಜಿಯನ್ನು ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....