Homeಮುಖಪುಟರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ ಸ್ಥಾನಗಳನ್ನು ಚುನಾವಣೆಯ ಮೂಲಕ ಮತ್ತು ಉಳಿದ 10ರಷ್ಟು ಸ್ಥಾನಗಳನ್ನು ಸಹ ನಾಮನಿರ್ದೇಶನದ (co-option) ಮೂಲಕ ಭರ್ತಿ ಮಾಡಬೇಕು. ಈಗಾಗಲೇ ಚುನಾವಣೆ ನಡೆದಿರುವ ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆಯಿದ್ದರೆ, ಅಲ್ಲಿಗೆ ನಾಮನಿರ್ದೇಶನದ ಮೂಲಕ ಮಹಿಳೆಯರ ಸಂಖ್ಯೆ ಹೆಚ್ಚಿಸುವ ಪ್ರಸ್ತಾವನೆಯನ್ನು ನ್ಯಾಯಾಲಯದ ಮುಂದೆ ಇಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಿರುವ ಆರು ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳೆಯರಿಗಾಗಿ ಸ್ಥಾನಗಳನ್ನು ಮೀಸಲಿಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಆರು ಬಾರ್ ಕೌನ್ಸಿಲ್‌ಗಳಲ್ಲಿ (ಆಂಧ್ರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ಬಿಹಾರ, ಛತ್ತೀಸ್‌ಗಢ) ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿರುವುದರಿಂದ, ಅಲ್ಲಿ ಮಹಿಳಾ ಮೀಸಲಾತಿಯನ್ನು ಈ ಬಾರಿ ಜಾರಿಗೊಳಿಸುವುದಿಲ್ಲ. ಆದರೆ, ಮಹಿಳಾ ಅಭ್ಯರ್ಥಿಗಳು ಧೈರ್ಯದಿಂದ ಚುನಾವಣೆಗೆ ಸ್ಪರ್ಧಿಸಲಿ ಮತ್ತು ವಕೀಲ ಮತದಾರರು ತಾವಾಗೇ ಮಹಿಳೆಯರಿಗೆ ಒಳ್ಳೆಯ ಪ್ರಾತಿನಿಧ್ಯ ಕೊಡಲು ಶ್ರಮಿಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉಳಿದ ಬಾರ್ ಕೌನ್ಸಿಲ್‌ಗಳ (ಅಂದರೆ ಚುನಾವಣೆ ಇನ್ನೂ ಆರಂಭವಾಗದೇ ಇರುವ ಎಲ್ಲ ಬಾರ್ ಕೌನ್ಸಿಲ್‌ಗಳು), ಒಟ್ಟು ಸದಸ್ಯ ಸ್ಥಾನಗಳ ಪೈಕಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ಕಡ್ಡಾಯವಾಗಿ ಇರಬೇಕು. ಇದರಲ್ಲಿ ಶೇಕಡ 20ರಷ್ಟು ಸ್ಥಾನಗಳನ್ನು ಚುನಾವಣೆಯ ಮೂಲಕ ಭರ್ತಿ ಮಾಡಬೇಕು. ಉಳಿದ ಶೇಕಡ 10ರಷ್ಟು ಸ್ಥಾನಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿಗೊಳಿಸಬೇಕು. ಸಹ-ನಾಮನಿರ್ದೇಶನ ಮಾಡುವ ಪ್ರಸ್ತಾಪವನ್ನು ನ್ಯಾಯಾಲಯದ ಮುಂದೆ ಇಡಬೇಕು (ನ್ಯಾಯಾಲಯದ ಅನುಮೋದನೆ ಪಡೆಯಬೇಕು) ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಒಂದು ವೇಳೆ ಯಾವುದಾದರೂ ಬಾರ್ ಕೌನ್ಸಿಲ್‌ನಲ್ಲಿ ಮಹಿಳಾ ವಕೀಲರು ಶೇಕಡ 30ರಷ್ಟು ಸ್ಥಾನಗಳಿಗೆ ಸ್ಪರ್ಧಿಸಲು ಮುಂದೆ ಬಾರದಿದ್ದರೂ ಸಹ, ಅಂತಹ ಸ್ಥಳಗಳಲ್ಲಿಯೂ ಸಹ-ನಾಮನಿರ್ದೇಶನದ ಮೂಲಕ ಮಹಿಳೆಯರನ್ನು ಸೇರಿಸಿ, ಅಂತಿಮವಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಪ್ರಾತಿನಿಧ್ಯ ದೊರೆಯುವಂತೆ ಮಾಡಬೇಕು ಎಂದು ಹೇಳಿದೆ.

ಬಾರ್ ಕೌನ್ಸಿಲ್‌ಗಳಲ್ಲಿ ಮಹಿಳಾ ಮೀಸಲಾತಿ ಕೋರಿ ಯೋಗಮಾಯ ಎಂ.ಜಿ ಮತ್ತು ಶೆಹ್ಲಾ ಚೌಧರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, ಈ ಆದೇಶ ನೀಡಿದೆ.

ಕಳೆದ ವಾರ, ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30 ರಷ್ಟು ಮಹಿಳಾ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನ್ಯಾಯಾಲಯವು ಭಾರತೀಯ ಬಾರ್ ಕೌನ್ಸಿಲ್‌ಗೆ (ಬಿಸಿಐ) ತಿಳಿಸಿತ್ತು. ಇಂದು ಪ್ರಸ್ತಾವನೆಯೊಂದಿಗೆ ಬರುವಂತೆ ನ್ಯಾಯಾಲಯವು ಬಿಸಿಐಗೆ ಸೂಚಿಸಿತ್ತು.

ಬಿಸಿಐ ತಾತ್ವಿಕವಾಗಿ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಕನಿಷ್ಠ ಶೇಕಡ 30ರಷ್ಟು ಮಹಿಳಾ ಮೀಸಲಾತಿ ಇರಬೇಕು ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಪ್ರಸ್ತಕ್ತ ವರ್ಷಕ್ಕೆ, ಬಾರ್ ಕೌನ್ಸಿಲ್‌ಗಳು ಮಹಿಳಾ ಅಭ್ಯರ್ಥಿಗಳನ್ನು ಸಹ-ನಾಮನಿರ್ದೇಶನದ ಮೂಲಕ ಭರ್ತಿ ಮಾಡಲು ಅನುಮತಿ ನೀಡಬೇಕು. ಮಹಿಳಾ ಸದಸ್ಯರ ಸಹ-ನಾಮನಿರ್ದೇಶನದ ಮೂಲಕ ಶೇಕಡ 15ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಅವಕಾಶ ಕೊಡಬೇಕು ಎಂದು ಹಿರಿಯ ವಕೀಲ ಹಾಗೂ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆದಾಗ್ಯೂ, ಸಹ-ನಾಮನಿರ್ದೇಶನದ ಮೂಲಕ ಶೇಕಡ 10ರಷ್ಟು ಸ್ಥಾನಗಳನ್ನು ಭರ್ತಿ ಮಾಡಲು ಮಾತ್ರ ನ್ಯಾಯಾಲಯ ಅವಕಾಶ ನೀಡಿದೆ.

ಎಲ್ಲಾ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲೂ ಒಂದೇ ರೀತಿಯಾಗಿ ಮಹಿಳೆಯರಿಗೆ ಶೇಕಡ 30ರಷ್ಟು ಮೀಸಲಾತಿ ಕಡ್ಡಾಯಗೊಳಿಸುವ ಒಟ್ಟು ಆದೇಶ (blanket order) ಸಮಂಜಸವಲ್ಲ. ಏಕೆಂದರೆ, ಅನೇಕ ರಾಜ್ಯಗಳಲ್ಲಿ ವೃತ್ತಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಮಹಿಳಾ ವಕೀಲರ ಸಂಖ್ಯೆ ಅತ್ಯಂತ ಕಡಿಮೆಯಿದೆ (ಕೆಲವು ರಾಜ್ಯಗಳಲ್ಲಿ ಶೇಕಡ 5-10ಕ್ಕಿಂತಲೂ ಕಡಿಮೆ). ಅಂತಹ ರಾಜ್ಯಗಳಲ್ಲಿ ಶೇಕಡ 30ರಷ್ಟು ಮೀಸಲಾತಿ ತುಂಬುವುದು ಕಷ್ಟಸಾಧ್ಯ ಮತ್ತು ವಾಸ್ತವಿಕವಲ್ಲ ಎಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ವಾದಿಸಿದರು.

ಅರ್ಜಿದಾರರಾದ ಯೋಗಮಾಯ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ ಮತ್ತು ಶ್ರೀರಾಮ್ ಪರಕ್ಕಟ್ ಅವರು ವಾದ ಮಂಡಿಸಿದರು. ಇತರ ಅರ್ಜಿದಾರರಾದ ಶೆಹ್ಲಾ ಚೌಧರಿ ಪರ ವಕೀಲ ಡಾ.ಚಾರು ಮಾಥುರ್ ವಾದ ಮಂಡಿಸಿದರು.

ತಮಿಳುನಾಡು ಬಾರ್ ಕೌನ್ಸಿಲ್‌ನ ಸಹ-ಅಧ್ಯಕ್ಷ ಕೆ. ಬಾಲು ಅವರು ಕರುಣಾಕರನ್ ಎಒಆರ್ ಮೂಲಕ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಶೇಕಡ 30ರಷ್ಟು ಪ್ರಾತಿನಿಧ್ಯವನ್ನು ಬೆಂಬಲಿಸಲಾಗಿತ್ತು. ಬಾಲು ಪರ ಹಾಜರಾದ ಹಿರಿಯ ವಕೀಲರು “ಒಮ್ಮೆ ಅಧ್ಯಕ್ಷರಾದವರು ಯಾವಾಗಲೂ ಅಧ್ಯಕ್ಷ” ಎಂಬ ಪರಿಸ್ಥಿತಿ ಇದೆ. ಅದನ್ನು ಬದಲಾಯಿಸಬೇಕಾಗಿದೆ ಎಂದು ಕೋರಿದ್ದರು.

ವಕೀಲರ ಪರವಾಗಿ ಕೆಲಸ ಮಾಡುವ ವಕೀಲರ ಸರ್ಕಾರೇತರ ಸಂಸ್ಥೆಯಾದ ಜನ ಅದಾಲತ್ ಪರವಾಗಿ ಹಿರಿಯ ವಕೀಲ ವಿನಯ್ ನವರೆ ಹಾಜರಾಗಿದ್ದರು. ಈ ಸಂಸ್ಥೆ ಕೂಡ ಮಧ್ಯಪ್ರವೇಶ ಅರ್ಜಿಯನ್ನು ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...