Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...