Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...