Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...