Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...