Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....