Homeಪರಿಸರಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಅರಣ್ಯ ಅತಿಕ್ರಮಣದಾರರ ಜೊತೆ ಯಾವುದೇ ರಾಜಿ ಇಲ್ಲ: 10,000 ಕಟ್ಟಡಗಳ ತೆರವಿಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಸುಪ್ರೀಂ ಕೋರ್ಟ್‌ ಹರ್ಯಾಣದ ಅರಾವಳಿ ಭಾಗದಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಿಸಿ ಕಟ್ಟಿದ 10,000 ಕಟ್ಟಡಗಳ ತೆರವಿಗೆ ಆದೇಶಿಸಿದೆ. ಸೋಮವಾರ ಜೂನ್‌ 7 ರಂದು ಪ್ರಕರಣದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ ಎಂದು ಹೇಳಿದೆ.

ಹರ್ಯಾಣದ ಲಕ್ಕದ್‌ಪುರ್‌-ಖೋರಿ ಗ್ರಾಮ ವ್ಯಾಪ್ತಿಯಲ್ಲಿ ಅರಾವಳಿ ಅರಣ್ಯ ಭಾಗವನ್ನು ಅತಿಕ್ರಮಿಸಿ ಸುಮಾರು 10,000 ನಿವಾಸದ ಕಟ್ಟಡಗಳನ್ನು ಅನೇಕರು ಕಟ್ಟಿಕೊಂಡಿದ್ದರು. ಅರಣ್ಯ ಅತಿಕ್ರಮಣದ ವಿಷಯದಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್ ಸ್ಥಳೀಯ ಆಡಳಿತವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

2020 ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ ಅರಣ್ಯ ಒತ್ತುವರಿಯನ್ನು ತೆರವುಗೊಳಿಸುವಂತೆ ಮಧ್ಯಂತರ ಆದೇಶ ನೀಡಿದೆ. ಆದರೆ ನಮ್ಮ ಆದೇಶಕ್ಕೆ ನೀವು ಕನಿಷ್ಠ ಮರ್ಯಾದೆಯನ್ನು ನೀಡಿಲ್ಲ. ಕಳೆದ ಒಂದೂವರೆ ವರ್ಷದಿಂದ ಸ್ಥಳೀಯ ಆಡಳಿತ ಏನು ಮಾಡುತ್ತಿದೆ ಎಂದು ಫರೀದಾ ಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌‌  ನಡೆಯನ್ನು ಸುಪ್ರೀಂ ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಜಸ್ಟಿಸ್ ಎ.ಎಮ್‌. ಖಾನ್ವಿಲ್‌ಕರ್‌ ಮತ್ತು ಜಸ್ಟಿಸ್ ದಿನೇಶ್‌ ಮಹೇಶ್ವರಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೂಡಲೆ ಒತ್ತುವರಿಯಾಗಿರುವ ಅರಣ್ಯವನ್ನು ತೆರವುಗೊಳಿಸಿ ಕೋರ್ಟ್‌ಗೆ ಮಾಹಿತಿ ನೀಡುವಂತೆ ಆದೇಶಿಸಿತು.

ಇದನ್ನೂ ಓದಿ : ಪರಿಸರ ಪೂರ್ವಾನುಮತಿ ಇಲ್ಲದೆ ಕೈಗಾರಿಕೆ ನಡೆಸುವಂತಿಲ್ಲ: ಹಸಿರು ನ್ಯಾಯಪೀಠ

ಕಟ್ಟಡಗಳ ತೆರವಿಗೆ ತಡೆ ಕೋರಿ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಕೋಲಿನ್‌ ಗೊನ್ಸಾಲ್ವೇಸ್‌ ಮನೆಗಳನ್ನು ಕಟ್ಟಿಕೊಂಡಿರುವವರು ಅತ್ಯಂತ ಬಡವರಿದ್ದಾರೆ. ಕೊರೋನಾ ಸಂದರ್ಭದಲ್ಲಿ ನ್ಯಾಯಾಲಯ ಬಡವರನ್ನು ಇನ್ನಷ್ಟು ಕಷ್ಟಕ್ಕೆ ದೂಡಬಾರದು. ಮನೆಗಳನ್ನು ಖಾಲಿ ಮಾಡಲು ನಿರ್ದಿಷ್ಟ ದಿನಾಂಕವನ್ನಾದರೂ ನೀಡಿ. ಜೊತೆಗೆ ಮನೆ ತೆರವು ಮಾಡಿದ ಕುಟುಂಬಗಳಿಗೆ  ಪುನರ್ವಸತಿ ಕಲ್ಪಿಸುವಂತೆ  ಹರ್ಯಾಣದ  ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿ ಎಂದು ಮನವಿ ಮಾಡಿದರು.

ಗೊನ್ಸಾಲ್ವೇಸ್‌ ಮನವಿಯನ್ನು ಮನ್ನಿಸದ ಸುಪ್ರೀಂ ಕೋರ್ಟ್‌ ಅರಣ್ಯ ಅತಿಕ್ರಮಣದ ವಿಚಾರದಲ್ಲಿ ಯಾವುದೇ ರಾಜಿ ಸಾದ್ಯವಿಲ್ಲ. ಪುನರ್ವಸತಿ ಕಲ್ಪಿಸುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.  ನಾವು ಆದೇಶ ನೀಡಲು ಸಾಧ್ಯವಿಲ್ಲ. ಬಡವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿರುವುದಕ್ಕೆ ನಾವು ಕೇವಲ ಕ್ಷಮೆಯನ್ನು ಮಾತ್ರ ಕೇಳಲು ಸಾಧ್ಯ ಎಂದು ಗೊನ್ಸಾಲ್ವೇಸ್‌ ಮನವಿಗೆ ಪ್ರತಿಕ್ರಿಯಿಸಿತು.

ಹಾಗೇ ಸುಪ್ರೀಂ ಕೋರ್ಟ್‌ ಯಾವುದೇ ಸಂಘರ್ಷವಿಲ್ಲದೇ ಶಾಂತಿಯುತವಾಗಿ ಅತಿಕ್ರಮಣದಾರರು ಅರಣ್ಯ ಭೂಮಿಯನ್ನು ತೆರವುಗೊಳಿಸಿದರೆ ಎಲ್ಲರಿಗೂ ಒಳ್ಳೆಯದು. ಸ್ಥಳೀಯ ಕಾರ್ಪೊರೇಶನ್‌ ಮೂಲಕ ಬಲವಂತವಾಗಿ ಮನೆ ತೆರವು ಮಾಡುವಂತ ಸನ್ನಿವೇಶ ಸೃಷ್ಟಿಸಬೇಡಿ ಎಂದು ಅರ್ಜಿದಾರರ ಪರ ವಕೀಲ ಗೊನ್ಸಾಲ್ವೇಸ್‌  ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತು.

6 ವಾರದೊಳಗೆ ಅತಿಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸುವಂತೆ ಹರ್ಯಾಣ ರಾಜ್ಯ ಅರಣ್ಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಜುಲೈ 27 ಕ್ಕೆ ಮುಂದೂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒತ್ತು ವರದಿಯಾದ ನೆಲ,ಕಾಡು,ಗೋಮಾಳ ಮುಂತಾದವುಗಳನ್ನು ಹಲವು ಮಗ್ಗುಲಲ್ಲಿ ಒರೆಹಚ್ಚಿ ನೋಡಬೇಕಾಗಿದೆ.
    ಪಬ್ಲಿಕ್ ಸೊತ್ತಿನ ಒತ್ತುವರಿಯ ಒಂದೊಂದು ಕೇಸಿನ ಉದ್ದ ಅಗಲವನ್ನು ಆಳವನ್ನು ಸದರಿ ಸೊತ್ತಿನಲ್ಲಿ ಇಳೆಹುಟ್ಟಿನ ಸರಕನ್ನು ಬಳಸಿ ಸೊತ್ತಿನ ಬೆಲೆ ಏರಿಕೆಯಾಗಿರುವುದನ್ನು ಕಡೆಗಣಿಸಬಾರದು.
    ಆಳ್ವಿಕೆಗೆ ಸದರಿ ಒತ್ತುವರಿಯಾದ ಜಾಗದ ಬೆಲೆಯನ್ನು ಪಡೆಯಲು ತೆರವುಮಾಡುವುದನ್ನು ಬದಿಗಿಟ್ಟು ಇತರೆ ದಾರಿಯತ್ತ ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...