Homeಮುಖಪುಟಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿ ಪ್ರಿವೆಂಟಿವ್ (ಮುಂಜಾಗೃತಿ ಬಂಧನ) ಬಂಧನ ಮಾಡಲಾಗಿರುವ ಕಾನೂನು ವಿದ್ಯಾರ್ಥಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಈ ಬಂಧನ ‘ಸಂಪೂರ್ಣವಾಗಿ ಅಸಮರ್ಥನೀಯ’ ಎಂದು ಕೋರ್ಟ್ ಹೇಳಿದೆ.

ಮಧ್ಯ ಪ್ರದೇಶದ ಬೇತುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜುಲೈ 11, 2024ರ ಬಂಧನ ಆದೇಶದಲ್ಲಿ ದೋಷ ಪತ್ತೆ ಹಚ್ಚಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಪ್ರಕರಣದಲ್ಲಿ ವಿವರವಾದ ತಾರ್ಕಿಕ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ.

ಬೆತುಲ್‌ನ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರೊಂದಿಗಿನ ಘರ್ಷಣೆಯ ನಂತರ ನಂತರ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆಯತ್ನ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳನ್ನು ಆತನ ವಿರುದ್ಧ ಹಾಕಿದ್ದರು.

ವಿದ್ಯಾರ್ಥಿ ಜೈಲಿನಲ್ಲಿದ್ದಾಗ ಆತನ ವಿರುದ್ಧ ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ನಂತರ ಈ ಆದೇಶವನ್ನು ದೃಢೀಕರಿಸಲಾಗಿತ್ತು. ಅಂದಿನಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ವಿಸ್ತರಿಸಿಕೊಂಡು ಬರಲಾಗಿತ್ತು.

“ಜುಲೈ 11, 2024ರ ಮೊದಲ ಬಂಧನ ಆದೇಶವನ್ನು ಪರಿಶೀಲಿಸಿದ ನಂತರ, ಮೇಲ್ಮನವಿದಾರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3(2) ರ ಅಡಿಯಲ್ಲಿ ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಆದಾಗ್ಯೂ, ಅವರನ್ನು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಿರುವ ಕಾರಣಗಳು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3 ರ ಉಪವಿಭಾಗ (2) ರ ಅಗತ್ಯವನ್ನು ಪೂರೈಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಮೇಲ್ಮನವಿದಾರರ ಪ್ರಿವೆಂಟಿವ್ ಬಂಧನವು ಸಂಪೂರ್ಣವಾಗಿ ಅಸಮರ್ಥನೀಯವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 27, 2025) ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸದೆ ಜಿಲ್ಲಾಧಿಕಾರಿಗಳೇ ಸ್ವತಃ ನಿರ್ಧರಿಸಿರುವ ಮೇಲ್ಮನವಿ (ಕಾನೂನು ವಿದ್ಯಾರ್ಥಿ) ಪ್ರಾತಿನಿಧ್ಯವನ್ನು ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಿದವರ ಬಂಧನದ ಸಂಗತಿಯನ್ನು ಮತ್ತು ನಿಯಮಿತ ಕ್ರಿಮಿನಲ್ ವಿಚಾರಣೆಯಲ್ಲಿ ಬಂಧನಕ್ಕೊಳಗಾಗಿದ್ದರೂ ಅವರನ್ನು ತಡೆಗಟ್ಟುವ ಬಂಧನಕ್ಕೆ ಏಕೆ ತೆಗೆದುಕೊಳ್ಳಲಾಯಿತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮುಂತಾದ ಇತರ ಕಾರಣಗಳಿಂದಾಗಿಯೂ ಸಹ ತಡೆಗಟ್ಟುವ ಬಂಧನವು ಅಸಮರ್ಥನೀಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಇತರ ಹಲವು ಅಂಶಗಳನ್ನು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಪ್ರಿವೆಂಟಿವ್ ಬಂಧನ ಅಸಮರ್ಥನೀಯ ಎಂದಿದೆ. ಪ್ರಸ್ತುತ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿರುವ ವಿದ್ಯಾರ್ಥಿಯನ್ನು ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಕಾನೂನು ವಿದ್ಯಾರ್ಥಿಯಾಗಿರುವ ಅನ್ನು ಅಲಿಯಾಸ್ ಅನಿಕೇತ್ ಅವರನ್ನು ಜುಲೈ 11, 2024ರ ಆದೇಶದ ಮೂಲಕ ಮೊದಲು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿತ್ತು ಮತ್ತು ಈ ಬಂಧನ ಆದೇಶವನ್ನು ನಾಲ್ಕು ಬಾರಿ ವಿಸ್ತರಿಸಲಾಗಿತ್ತು. ಕೊನೆಯ ವಿಸ್ತರಣಾ ಆದೇಶದ ಪ್ರಕಾರ, ಅವರ ಪ್ರಿವೆಂಟಿವ್ ಬಂಧನ ಅವಧಿಯು ಜುಲೈ 12, 2025 ರವರೆಗೆ ಇರಲಿದೆ.

ರಾಜ್ಯ ಸರ್ಕಾರವು ಪ್ರಸ್ತುತಪಡಿಸಿರುವ ದಾಖಲೆಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನವನ್ನು ಸಮರ್ಥಿಸಲು ಕಾನೂನು ವಿದ್ಯಾರ್ಥಿಯ ವಿರುದ್ಧ ಪ್ರಸ್ತುತ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಂಬತ್ತು ಕ್ರಿಮಿನಲ್ ಪೂರ್ವಾಪರಗಳನ್ನು ಉಲ್ಲೇಖಿಸಲಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ವಿದ್ಯಾರ್ಥಿ ಪರ ವಕೀಲರು, ಅವರ ವಿರುದ್ದದ ಹಿಂದಿನ ಎಂಟು ಪ್ರಕರಣಗಳ ಪೈಕಿ ಐದು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ ಮತ್ತು ಒಂದು ಪ್ರಕರಣದಲ್ಲಿ, ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಆದರೆ ಶಿಕ್ಷೆ ಕೇವಲ ದಂಡ ವಿಧಿಸುವಿಕೆ ಎಂದು ತಿಳಿಸಿದ್ದಾರೆ.

ಉಳಿದ ಎರಡು ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ ಮತ್ತು ಕಾನೂನು ವಿದ್ಯಾರ್ಥಿ ಆ ವಿಷಯಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿ ವಿರುದ್ಧ ದಾಖಲಾಗಿದ್ದ ಪ್ರಸ್ತುತ ಕ್ರಿಮಿನಲ್ ಪ್ರಕರಣದಲ್ಲಿ, ಜನವರಿ 28, 2025 ರಂದು ಅವರಿಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಅವರು ಪ್ರಿವೆಂಟಿವ್ ಬಂಧನದ ಕಾರಣಕ್ಕೆ ಮಾತ್ರ ಜೈಲಿನಲ್ಲಿದ್ದಾರೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಫೆಬ್ರವರಿ 25ರಂದು, ಮಧ್ಯಪ್ರದೇಶ ಹೈಕೋರ್ಟ್ ವಿದ್ಯಾರ್ಥಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿತ್ತು. ವಿದ್ಯಾರ್ಥಿ ದೀರ್ಘ ಕ್ರಿಮಿನಲ್ ಪ್ರಕರಣಗಳ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವನ್ನುಂಟುಮಾಡುವ ನಿಯಮಿತ ಅಪರಾಧಿ ಎಂದು ಹೇಳಿತ್ತು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...