Homeಮುಖಪುಟಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿ ಪ್ರಿವೆಂಟಿವ್ (ಮುಂಜಾಗೃತಿ ಬಂಧನ) ಬಂಧನ ಮಾಡಲಾಗಿರುವ ಕಾನೂನು ವಿದ್ಯಾರ್ಥಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಈ ಬಂಧನ ‘ಸಂಪೂರ್ಣವಾಗಿ ಅಸಮರ್ಥನೀಯ’ ಎಂದು ಕೋರ್ಟ್ ಹೇಳಿದೆ.

ಮಧ್ಯ ಪ್ರದೇಶದ ಬೇತುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜುಲೈ 11, 2024ರ ಬಂಧನ ಆದೇಶದಲ್ಲಿ ದೋಷ ಪತ್ತೆ ಹಚ್ಚಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಪ್ರಕರಣದಲ್ಲಿ ವಿವರವಾದ ತಾರ್ಕಿಕ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ.

ಬೆತುಲ್‌ನ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರೊಂದಿಗಿನ ಘರ್ಷಣೆಯ ನಂತರ ನಂತರ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆಯತ್ನ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳನ್ನು ಆತನ ವಿರುದ್ಧ ಹಾಕಿದ್ದರು.

ವಿದ್ಯಾರ್ಥಿ ಜೈಲಿನಲ್ಲಿದ್ದಾಗ ಆತನ ವಿರುದ್ಧ ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ನಂತರ ಈ ಆದೇಶವನ್ನು ದೃಢೀಕರಿಸಲಾಗಿತ್ತು. ಅಂದಿನಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ವಿಸ್ತರಿಸಿಕೊಂಡು ಬರಲಾಗಿತ್ತು.

“ಜುಲೈ 11, 2024ರ ಮೊದಲ ಬಂಧನ ಆದೇಶವನ್ನು ಪರಿಶೀಲಿಸಿದ ನಂತರ, ಮೇಲ್ಮನವಿದಾರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3(2) ರ ಅಡಿಯಲ್ಲಿ ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಆದಾಗ್ಯೂ, ಅವರನ್ನು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಿರುವ ಕಾರಣಗಳು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3 ರ ಉಪವಿಭಾಗ (2) ರ ಅಗತ್ಯವನ್ನು ಪೂರೈಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಮೇಲ್ಮನವಿದಾರರ ಪ್ರಿವೆಂಟಿವ್ ಬಂಧನವು ಸಂಪೂರ್ಣವಾಗಿ ಅಸಮರ್ಥನೀಯವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 27, 2025) ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸದೆ ಜಿಲ್ಲಾಧಿಕಾರಿಗಳೇ ಸ್ವತಃ ನಿರ್ಧರಿಸಿರುವ ಮೇಲ್ಮನವಿ (ಕಾನೂನು ವಿದ್ಯಾರ್ಥಿ) ಪ್ರಾತಿನಿಧ್ಯವನ್ನು ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಿದವರ ಬಂಧನದ ಸಂಗತಿಯನ್ನು ಮತ್ತು ನಿಯಮಿತ ಕ್ರಿಮಿನಲ್ ವಿಚಾರಣೆಯಲ್ಲಿ ಬಂಧನಕ್ಕೊಳಗಾಗಿದ್ದರೂ ಅವರನ್ನು ತಡೆಗಟ್ಟುವ ಬಂಧನಕ್ಕೆ ಏಕೆ ತೆಗೆದುಕೊಳ್ಳಲಾಯಿತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮುಂತಾದ ಇತರ ಕಾರಣಗಳಿಂದಾಗಿಯೂ ಸಹ ತಡೆಗಟ್ಟುವ ಬಂಧನವು ಅಸಮರ್ಥನೀಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಇತರ ಹಲವು ಅಂಶಗಳನ್ನು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಪ್ರಿವೆಂಟಿವ್ ಬಂಧನ ಅಸಮರ್ಥನೀಯ ಎಂದಿದೆ. ಪ್ರಸ್ತುತ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿರುವ ವಿದ್ಯಾರ್ಥಿಯನ್ನು ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಕಾನೂನು ವಿದ್ಯಾರ್ಥಿಯಾಗಿರುವ ಅನ್ನು ಅಲಿಯಾಸ್ ಅನಿಕೇತ್ ಅವರನ್ನು ಜುಲೈ 11, 2024ರ ಆದೇಶದ ಮೂಲಕ ಮೊದಲು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿತ್ತು ಮತ್ತು ಈ ಬಂಧನ ಆದೇಶವನ್ನು ನಾಲ್ಕು ಬಾರಿ ವಿಸ್ತರಿಸಲಾಗಿತ್ತು. ಕೊನೆಯ ವಿಸ್ತರಣಾ ಆದೇಶದ ಪ್ರಕಾರ, ಅವರ ಪ್ರಿವೆಂಟಿವ್ ಬಂಧನ ಅವಧಿಯು ಜುಲೈ 12, 2025 ರವರೆಗೆ ಇರಲಿದೆ.

ರಾಜ್ಯ ಸರ್ಕಾರವು ಪ್ರಸ್ತುತಪಡಿಸಿರುವ ದಾಖಲೆಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನವನ್ನು ಸಮರ್ಥಿಸಲು ಕಾನೂನು ವಿದ್ಯಾರ್ಥಿಯ ವಿರುದ್ಧ ಪ್ರಸ್ತುತ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಂಬತ್ತು ಕ್ರಿಮಿನಲ್ ಪೂರ್ವಾಪರಗಳನ್ನು ಉಲ್ಲೇಖಿಸಲಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ವಿದ್ಯಾರ್ಥಿ ಪರ ವಕೀಲರು, ಅವರ ವಿರುದ್ದದ ಹಿಂದಿನ ಎಂಟು ಪ್ರಕರಣಗಳ ಪೈಕಿ ಐದು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ ಮತ್ತು ಒಂದು ಪ್ರಕರಣದಲ್ಲಿ, ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಆದರೆ ಶಿಕ್ಷೆ ಕೇವಲ ದಂಡ ವಿಧಿಸುವಿಕೆ ಎಂದು ತಿಳಿಸಿದ್ದಾರೆ.

ಉಳಿದ ಎರಡು ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ ಮತ್ತು ಕಾನೂನು ವಿದ್ಯಾರ್ಥಿ ಆ ವಿಷಯಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿ ವಿರುದ್ಧ ದಾಖಲಾಗಿದ್ದ ಪ್ರಸ್ತುತ ಕ್ರಿಮಿನಲ್ ಪ್ರಕರಣದಲ್ಲಿ, ಜನವರಿ 28, 2025 ರಂದು ಅವರಿಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಅವರು ಪ್ರಿವೆಂಟಿವ್ ಬಂಧನದ ಕಾರಣಕ್ಕೆ ಮಾತ್ರ ಜೈಲಿನಲ್ಲಿದ್ದಾರೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಫೆಬ್ರವರಿ 25ರಂದು, ಮಧ್ಯಪ್ರದೇಶ ಹೈಕೋರ್ಟ್ ವಿದ್ಯಾರ್ಥಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿತ್ತು. ವಿದ್ಯಾರ್ಥಿ ದೀರ್ಘ ಕ್ರಿಮಿನಲ್ ಪ್ರಕರಣಗಳ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವನ್ನುಂಟುಮಾಡುವ ನಿಯಮಿತ ಅಪರಾಧಿ ಎಂದು ಹೇಳಿತ್ತು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...