Homeಮುಖಪುಟಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿ ಪ್ರಿವೆಂಟಿವ್ (ಮುಂಜಾಗೃತಿ ಬಂಧನ) ಬಂಧನ ಮಾಡಲಾಗಿರುವ ಕಾನೂನು ವಿದ್ಯಾರ್ಥಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಈ ಬಂಧನ ‘ಸಂಪೂರ್ಣವಾಗಿ ಅಸಮರ್ಥನೀಯ’ ಎಂದು ಕೋರ್ಟ್ ಹೇಳಿದೆ.

ಮಧ್ಯ ಪ್ರದೇಶದ ಬೇತುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜುಲೈ 11, 2024ರ ಬಂಧನ ಆದೇಶದಲ್ಲಿ ದೋಷ ಪತ್ತೆ ಹಚ್ಚಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಪ್ರಕರಣದಲ್ಲಿ ವಿವರವಾದ ತಾರ್ಕಿಕ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ.

ಬೆತುಲ್‌ನ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರೊಂದಿಗಿನ ಘರ್ಷಣೆಯ ನಂತರ ನಂತರ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆಯತ್ನ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳನ್ನು ಆತನ ವಿರುದ್ಧ ಹಾಕಿದ್ದರು.

ವಿದ್ಯಾರ್ಥಿ ಜೈಲಿನಲ್ಲಿದ್ದಾಗ ಆತನ ವಿರುದ್ಧ ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ನಂತರ ಈ ಆದೇಶವನ್ನು ದೃಢೀಕರಿಸಲಾಗಿತ್ತು. ಅಂದಿನಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ವಿಸ್ತರಿಸಿಕೊಂಡು ಬರಲಾಗಿತ್ತು.

“ಜುಲೈ 11, 2024ರ ಮೊದಲ ಬಂಧನ ಆದೇಶವನ್ನು ಪರಿಶೀಲಿಸಿದ ನಂತರ, ಮೇಲ್ಮನವಿದಾರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3(2) ರ ಅಡಿಯಲ್ಲಿ ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಆದಾಗ್ಯೂ, ಅವರನ್ನು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಿರುವ ಕಾರಣಗಳು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3 ರ ಉಪವಿಭಾಗ (2) ರ ಅಗತ್ಯವನ್ನು ಪೂರೈಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಮೇಲ್ಮನವಿದಾರರ ಪ್ರಿವೆಂಟಿವ್ ಬಂಧನವು ಸಂಪೂರ್ಣವಾಗಿ ಅಸಮರ್ಥನೀಯವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 27, 2025) ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸದೆ ಜಿಲ್ಲಾಧಿಕಾರಿಗಳೇ ಸ್ವತಃ ನಿರ್ಧರಿಸಿರುವ ಮೇಲ್ಮನವಿ (ಕಾನೂನು ವಿದ್ಯಾರ್ಥಿ) ಪ್ರಾತಿನಿಧ್ಯವನ್ನು ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಿದವರ ಬಂಧನದ ಸಂಗತಿಯನ್ನು ಮತ್ತು ನಿಯಮಿತ ಕ್ರಿಮಿನಲ್ ವಿಚಾರಣೆಯಲ್ಲಿ ಬಂಧನಕ್ಕೊಳಗಾಗಿದ್ದರೂ ಅವರನ್ನು ತಡೆಗಟ್ಟುವ ಬಂಧನಕ್ಕೆ ಏಕೆ ತೆಗೆದುಕೊಳ್ಳಲಾಯಿತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮುಂತಾದ ಇತರ ಕಾರಣಗಳಿಂದಾಗಿಯೂ ಸಹ ತಡೆಗಟ್ಟುವ ಬಂಧನವು ಅಸಮರ್ಥನೀಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಇತರ ಹಲವು ಅಂಶಗಳನ್ನು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಪ್ರಿವೆಂಟಿವ್ ಬಂಧನ ಅಸಮರ್ಥನೀಯ ಎಂದಿದೆ. ಪ್ರಸ್ತುತ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿರುವ ವಿದ್ಯಾರ್ಥಿಯನ್ನು ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಕಾನೂನು ವಿದ್ಯಾರ್ಥಿಯಾಗಿರುವ ಅನ್ನು ಅಲಿಯಾಸ್ ಅನಿಕೇತ್ ಅವರನ್ನು ಜುಲೈ 11, 2024ರ ಆದೇಶದ ಮೂಲಕ ಮೊದಲು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿತ್ತು ಮತ್ತು ಈ ಬಂಧನ ಆದೇಶವನ್ನು ನಾಲ್ಕು ಬಾರಿ ವಿಸ್ತರಿಸಲಾಗಿತ್ತು. ಕೊನೆಯ ವಿಸ್ತರಣಾ ಆದೇಶದ ಪ್ರಕಾರ, ಅವರ ಪ್ರಿವೆಂಟಿವ್ ಬಂಧನ ಅವಧಿಯು ಜುಲೈ 12, 2025 ರವರೆಗೆ ಇರಲಿದೆ.

ರಾಜ್ಯ ಸರ್ಕಾರವು ಪ್ರಸ್ತುತಪಡಿಸಿರುವ ದಾಖಲೆಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನವನ್ನು ಸಮರ್ಥಿಸಲು ಕಾನೂನು ವಿದ್ಯಾರ್ಥಿಯ ವಿರುದ್ಧ ಪ್ರಸ್ತುತ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಂಬತ್ತು ಕ್ರಿಮಿನಲ್ ಪೂರ್ವಾಪರಗಳನ್ನು ಉಲ್ಲೇಖಿಸಲಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ವಿದ್ಯಾರ್ಥಿ ಪರ ವಕೀಲರು, ಅವರ ವಿರುದ್ದದ ಹಿಂದಿನ ಎಂಟು ಪ್ರಕರಣಗಳ ಪೈಕಿ ಐದು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ ಮತ್ತು ಒಂದು ಪ್ರಕರಣದಲ್ಲಿ, ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಆದರೆ ಶಿಕ್ಷೆ ಕೇವಲ ದಂಡ ವಿಧಿಸುವಿಕೆ ಎಂದು ತಿಳಿಸಿದ್ದಾರೆ.

ಉಳಿದ ಎರಡು ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ ಮತ್ತು ಕಾನೂನು ವಿದ್ಯಾರ್ಥಿ ಆ ವಿಷಯಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿ ವಿರುದ್ಧ ದಾಖಲಾಗಿದ್ದ ಪ್ರಸ್ತುತ ಕ್ರಿಮಿನಲ್ ಪ್ರಕರಣದಲ್ಲಿ, ಜನವರಿ 28, 2025 ರಂದು ಅವರಿಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಅವರು ಪ್ರಿವೆಂಟಿವ್ ಬಂಧನದ ಕಾರಣಕ್ಕೆ ಮಾತ್ರ ಜೈಲಿನಲ್ಲಿದ್ದಾರೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಫೆಬ್ರವರಿ 25ರಂದು, ಮಧ್ಯಪ್ರದೇಶ ಹೈಕೋರ್ಟ್ ವಿದ್ಯಾರ್ಥಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿತ್ತು. ವಿದ್ಯಾರ್ಥಿ ದೀರ್ಘ ಕ್ರಿಮಿನಲ್ ಪ್ರಕರಣಗಳ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವನ್ನುಂಟುಮಾಡುವ ನಿಯಮಿತ ಅಪರಾಧಿ ಎಂದು ಹೇಳಿತ್ತು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...