Homeಮುಖಪುಟಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ಎನ್‌ಎಸ್‌ಎ ಕಾಯ್ದೆಯಡಿ ಕಾನೂನು ವಿದ್ಯಾರ್ಥಿಯ ಬಂಧನ: ತಕ್ಷಣ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿ ಪ್ರಿವೆಂಟಿವ್ (ಮುಂಜಾಗೃತಿ ಬಂಧನ) ಬಂಧನ ಮಾಡಲಾಗಿರುವ ಕಾನೂನು ವಿದ್ಯಾರ್ಥಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ. ಈ ಬಂಧನ ‘ಸಂಪೂರ್ಣವಾಗಿ ಅಸಮರ್ಥನೀಯ’ ಎಂದು ಕೋರ್ಟ್ ಹೇಳಿದೆ.

ಮಧ್ಯ ಪ್ರದೇಶದ ಬೇತುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜುಲೈ 11, 2024ರ ಬಂಧನ ಆದೇಶದಲ್ಲಿ ದೋಷ ಪತ್ತೆ ಹಚ್ಚಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು, ಪ್ರಕರಣದಲ್ಲಿ ವಿವರವಾದ ತಾರ್ಕಿಕ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ.

ಬೆತುಲ್‌ನ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಾಧ್ಯಾಪಕರೊಂದಿಗಿನ ಘರ್ಷಣೆಯ ನಂತರ ನಂತರ ಪೊಲೀಸರು ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಕೊಲೆಯತ್ನ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳನ್ನು ಆತನ ವಿರುದ್ಧ ಹಾಕಿದ್ದರು.

ವಿದ್ಯಾರ್ಥಿ ಜೈಲಿನಲ್ಲಿದ್ದಾಗ ಆತನ ವಿರುದ್ಧ ಎನ್‌ಎಸ್‌ಎ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನ ಆದೇಶವನ್ನು ಹೊರಡಿಸಲಾಗಿತ್ತು. ನಂತರ ಈ ಆದೇಶವನ್ನು ದೃಢೀಕರಿಸಲಾಗಿತ್ತು. ಅಂದಿನಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಅದನ್ನು ವಿಸ್ತರಿಸಿಕೊಂಡು ಬರಲಾಗಿತ್ತು.

“ಜುಲೈ 11, 2024ರ ಮೊದಲ ಬಂಧನ ಆದೇಶವನ್ನು ಪರಿಶೀಲಿಸಿದ ನಂತರ, ಮೇಲ್ಮನವಿದಾರರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3(2) ರ ಅಡಿಯಲ್ಲಿ ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಆದಾಗ್ಯೂ, ಅವರನ್ನು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಿರುವ ಕಾರಣಗಳು ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ಸೆಕ್ಷನ್ 3 ರ ಉಪವಿಭಾಗ (2) ರ ಅಗತ್ಯವನ್ನು ಪೂರೈಸುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಆದ್ದರಿಂದ ಮೇಲ್ಮನವಿದಾರರ ಪ್ರಿವೆಂಟಿವ್ ಬಂಧನವು ಸಂಪೂರ್ಣವಾಗಿ ಅಸಮರ್ಥನೀಯವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜೂನ್ 27, 2025) ರಂದು ನೀಡಿದ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸದೆ ಜಿಲ್ಲಾಧಿಕಾರಿಗಳೇ ಸ್ವತಃ ನಿರ್ಧರಿಸಿರುವ ಮೇಲ್ಮನವಿ (ಕಾನೂನು ವಿದ್ಯಾರ್ಥಿ) ಪ್ರಾತಿನಿಧ್ಯವನ್ನು ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸಿದವರ ಬಂಧನದ ಸಂಗತಿಯನ್ನು ಮತ್ತು ನಿಯಮಿತ ಕ್ರಿಮಿನಲ್ ವಿಚಾರಣೆಯಲ್ಲಿ ಬಂಧನಕ್ಕೊಳಗಾಗಿದ್ದರೂ ಅವರನ್ನು ತಡೆಗಟ್ಟುವ ಬಂಧನಕ್ಕೆ ಏಕೆ ತೆಗೆದುಕೊಳ್ಳಲಾಯಿತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಮುಂತಾದ ಇತರ ಕಾರಣಗಳಿಂದಾಗಿಯೂ ಸಹ ತಡೆಗಟ್ಟುವ ಬಂಧನವು ಅಸಮರ್ಥನೀಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಇತರ ಹಲವು ಅಂಶಗಳನ್ನು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಪ್ರಿವೆಂಟಿವ್ ಬಂಧನ ಅಸಮರ್ಥನೀಯ ಎಂದಿದೆ. ಪ್ರಸ್ತುತ ಭೋಪಾಲ್‌ನ ಕೇಂದ್ರ ಕಾರಾಗೃಹದಲ್ಲಿರುವ ವಿದ್ಯಾರ್ಥಿಯನ್ನು ಬೇರೆ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಕಾನೂನು ವಿದ್ಯಾರ್ಥಿಯಾಗಿರುವ ಅನ್ನು ಅಲಿಯಾಸ್ ಅನಿಕೇತ್ ಅವರನ್ನು ಜುಲೈ 11, 2024ರ ಆದೇಶದ ಮೂಲಕ ಮೊದಲು ಪ್ರಿವೆಂಟಿವ್ ಬಂಧನಕ್ಕೆ ಒಳಪಡಿಸಲಾಗಿತ್ತು ಮತ್ತು ಈ ಬಂಧನ ಆದೇಶವನ್ನು ನಾಲ್ಕು ಬಾರಿ ವಿಸ್ತರಿಸಲಾಗಿತ್ತು. ಕೊನೆಯ ವಿಸ್ತರಣಾ ಆದೇಶದ ಪ್ರಕಾರ, ಅವರ ಪ್ರಿವೆಂಟಿವ್ ಬಂಧನ ಅವಧಿಯು ಜುಲೈ 12, 2025 ರವರೆಗೆ ಇರಲಿದೆ.

ರಾಜ್ಯ ಸರ್ಕಾರವು ಪ್ರಸ್ತುತಪಡಿಸಿರುವ ದಾಖಲೆಗಳ ಪ್ರಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ, 1980ರ ನಿಬಂಧನೆಗಳ ಅಡಿಯಲ್ಲಿ ಪ್ರಿವೆಂಟಿವ್ ಬಂಧನವನ್ನು ಸಮರ್ಥಿಸಲು ಕಾನೂನು ವಿದ್ಯಾರ್ಥಿಯ ವಿರುದ್ಧ ಪ್ರಸ್ತುತ ಕ್ರಿಮಿನಲ್ ಪ್ರಕರಣ ಸೇರಿದಂತೆ ಒಂಬತ್ತು ಕ್ರಿಮಿನಲ್ ಪೂರ್ವಾಪರಗಳನ್ನು ಉಲ್ಲೇಖಿಸಲಾಗಿದೆ ಎಂದು ನ್ಯಾಯಾಲಯವು ಕಂಡುಕೊಂಡಿದೆ ಎಂದು ನ್ಯಾಯಪೀಠ ಹೇಳಿದೆ.

ಆದಾಗ್ಯೂ, ವಿದ್ಯಾರ್ಥಿ ಪರ ವಕೀಲರು, ಅವರ ವಿರುದ್ದದ ಹಿಂದಿನ ಎಂಟು ಪ್ರಕರಣಗಳ ಪೈಕಿ ಐದು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ ಮತ್ತು ಒಂದು ಪ್ರಕರಣದಲ್ಲಿ, ಅವರು ತಪ್ಪಿತಸ್ಥರೆಂದು ಸಾಬೀತಾಗಿದೆ. ಆದರೆ ಶಿಕ್ಷೆ ಕೇವಲ ದಂಡ ವಿಧಿಸುವಿಕೆ ಎಂದು ತಿಳಿಸಿದ್ದಾರೆ.

ಉಳಿದ ಎರಡು ಪ್ರಕರಣಗಳು ಪ್ರಸ್ತುತ ಬಾಕಿ ಉಳಿದಿವೆ ಮತ್ತು ಕಾನೂನು ವಿದ್ಯಾರ್ಥಿ ಆ ವಿಷಯಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕಳೆದ ವರ್ಷ ವಿದ್ಯಾರ್ಥಿ ವಿರುದ್ಧ ದಾಖಲಾಗಿದ್ದ ಪ್ರಸ್ತುತ ಕ್ರಿಮಿನಲ್ ಪ್ರಕರಣದಲ್ಲಿ, ಜನವರಿ 28, 2025 ರಂದು ಅವರಿಗೆ ಜಾಮೀನು ನೀಡಲಾಗಿದೆ. ಪ್ರಸ್ತುತ ಅವರು ಪ್ರಿವೆಂಟಿವ್ ಬಂಧನದ ಕಾರಣಕ್ಕೆ ಮಾತ್ರ ಜೈಲಿನಲ್ಲಿದ್ದಾರೆ ಎಂಬುವುದನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ಫೆಬ್ರವರಿ 25ರಂದು, ಮಧ್ಯಪ್ರದೇಶ ಹೈಕೋರ್ಟ್ ವಿದ್ಯಾರ್ಥಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿತ್ತು. ವಿದ್ಯಾರ್ಥಿ ದೀರ್ಘ ಕ್ರಿಮಿನಲ್ ಪ್ರಕರಣಗಳ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಗೆ ಅಪಾಯವನ್ನುಂಟುಮಾಡುವ ನಿಯಮಿತ ಅಪರಾಧಿ ಎಂದು ಹೇಳಿತ್ತು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ನಾಗರಿಕರ ಮತದಾನದ ಹಕ್ಕು ಕಸಿಯುವ ಬಿಜೆಪಿಯ ಹುನ್ನಾರ-ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...