Homeಮುಖಪುಟಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ನಾಯಿ ಕಡಿತದ ಘಟನೆಗಳಲ್ಲಿ ಆತಂಕಕಾರಿ ಏರಿಕೆಯನ್ನು ಉಲ್ಲೇಖಿಸಿ ಪ್ರಮುಖ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಡಿಪೋಗಳು ಮತ್ತು ರೈಲು ನಿಲ್ದಾಣಗಳಿಗೆ ಬೀದಿ ನಾಯಿಗಳ ಪ್ರವೇಶವನ್ನು ತಡೆಯಲು ಸರಿಯಾಗಿ ಬೇಲಿ ಹಾಕಬೇಕು ಎಂದು ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಸ್ವಯಂ ಪ್ರೇರಿತವಾಗಿ ಬೀದಿ ನಾಯಿಗಳ ವಿಷಯದಲ್ಲಿ ಆದೇಶ ನೀಡಿದೆ.

ಸೂಚಿಸಿದ ಪ್ರದೇಶಗಳಿಂದ ಎತ್ತಿಕೊಂಡ ನಾಯಿಗಳನ್ನು ಒಂದೇ ಸ್ಥಳಕ್ಕೆ ಬಿಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳಿಗೆ ಅನುಸಾರವಾಗಿ, ಈ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸೆರೆಹಿಡಿದು ಲಸಿಕೆ ಮತ್ತು ಸಂತಾನಹರಣ ಚಿಕಿತ್ಸೆಯ ನಂತರ ಅವುಗಳನ್ನು ಗೊತ್ತುಪಡಿಸಿದ ಶೆಲ್ಟರ್‌ಗಳಿಗೆ ಸ್ಥಳಾಂತರಿಸುವುದು ಸಂಬಂಧಪಟ್ಟ ಸ್ಥಳೀಯ ಸ್ವ-ಆಡಳಿತ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.

ರಸ್ತೆ ಮತ್ತು ಹೆದ್ದಾರಿಗಳಿಂದ ಬೀದಿ ದನಗಳು ಸೇರಿದಂತೆ ಇತರ ಬೀದಿ ಪ್ರಾಣಿಗಳನ್ನು ತೆಗೆದುಹಾಕಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿತು.

ಜುಲೈ 28 ರಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠವು ಸ್ವಯಂಪ್ರೇರಿತವಾಗಿ ಈ ಪ್ರಕರಣದ ವಿಚಾರಣೆ ನಡೆಸಿತು.

ಆಗಸ್ಟ್ 11 ರಂದು, “ನಾಯಿ ಕಡಿತ/ರೇಬಿಸ್‌ನ ಭೀತಿ” ಬಗ್ಗೆ ಪೀಠವು ಗಂಭೀರ ಕಳವಳ ವ್ಯಕ್ತಪಡಿಸಿತು. ದೆಹಲಿ ಸರ್ಕಾರಿ ಅಧಿಕಾರಿಗಳಿಗೆ ನಾಯಿಗಳನ್ನು ಬಿಡುಗಡೆ ಮಾಡುವುದನ್ನು ತಡೆಯುವ ಜೊತೆಗೆ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಿತು. ಸುಪ್ರೀಂ ಕೋರ್ಟ್ ರಾಷ್ಟ್ರೀಯ ರಾಜಧಾನಿ ದೆಹಲಿಯ ಅಧಿಕಾರಿಗಳಿಗೆ ಎಲ್ಲ ಪ್ರದೇಶಗಳಿಂದ ಬೀದಿ ನಾಯಿಗಳನ್ನು ತಕ್ಷಣವೇ ಎತ್ತಿಕೊಂಡು ನಾಯಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿತು.

ನಾಟಕೀಯ ಬೆಳವಣಿಗೆಯಲ್ಲಿ, ಕೆಲವು ವಕೀಲರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಹಿಂದಿನ ನಿರ್ದೇಶನಗಳು ಇತರ ಪೀಠಗಳು ಹೊರಡಿಸಿದ ಹಿಂದಿನ ಆದೇಶಗಳೊಂದಿಗೆ ಸಂಘರ್ಷ ಹೊಂದಿವೆ ಎಂದು ತಿಳಿಸಿದ ನಂತರ, ಆಗಸ್ಟ್ 13 ರಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠಕ್ಕೆ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ವರ್ಗಾಯಿಸಲಾಯಿತು.

ಮರುದಿನ, ಆಗಸ್ಟ್ 14 ರಂದು, ಮೂವರು ನ್ಯಾಯಾಧೀಶರ ಪೀಠವು ಈ ವಿಷಯವನ್ನು ಆಲಿಸಿ, ಆಗಸ್ಟ್ 11 ರ ನಿರ್ದೇಶನಗಳಿಗೆ ತಡೆ ನೀಡಬೇಕೆ ಎಂಬುದರ ಕುರಿತು ತನ್ನ ಆದೇಶವನ್ನು ಕಾಯ್ದಿರಿಸಿತು. ನಂತರ, ಆಗಸ್ಟ್ 22 ರಂದು, ನ್ಯಾಯಮೂರ್ತಿ ಪಾರ್ದಿವಾಲಾ ಅವರ ಪೀಠವು ಹೊರಡಿಸಿದ ಆದೇಶಗಳನ್ನು ತಡೆಹಿಡಿದ ಪೀಠವು, “ಆಗಸ್ಟ್ 11, 2025 ರಂದು ನೀಡಲಾದ ಆದೇಶದಲ್ಲಿ ಚಿಕಿತ್ಸೆ ಪಡೆದ ಮತ್ತು ಲಸಿಕೆ ಹಾಕಿದ ನಾಯಿಗಳನ್ನು ಬಿಡುಗಡೆ ಮಾಡುವುದನ್ನು ನಿಷೇಧಿಸುವ ನಿರ್ದೇಶನವು ತುಂಬಾ ಕಠಿಣವಾಗಿದೆ ಎಂದು ತೋರುತ್ತದೆ” ಎಂದು ಗಮನಿಸಿತು.

ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ನಿಯಮಗಳ ನಿಯಮ 11(9) ಅನ್ನು ಉಲ್ಲೇಖಿಸಿ, ಸೋಂಕಿತ ಅಥವಾ ರೇಬೀಸ್ ಸೋಂಕಿಗೆ ಒಳಗಾಗಿರುವ ಶಂಕಿತ ಅಥವಾ ಆಕ್ರಮಣಕಾರಿ ನಡವಳಿಕೆಯನ್ನು ತೋರಿಸುವ ನಾಯಿಗಳನ್ನು ಹೊರತುಪಡಿಸಿ, ಬೀದಿ ನಾಯಿಗಳಿಗೆ ಸಂತಾನಹರಣ, ಜಂತುಹುಳು ನಿವಾರಣ ಮತ್ತು ರೋಗನಿರೋಧಕತೆಯ ನಂತರ ಅವುಗಳನ್ನು ಎತ್ತಿಕೊಂಡ ಅದೇ ಪ್ರದೇಶಕ್ಕೆ ಮತ್ತೆ ಬಿಡಬೇಕು ಎಂದು ಪೀಠ ಸ್ಪಷ್ಟಪಡಿಸಿತು.

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...