Homeಮುಖಪುಟಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಇವಿಎಂ ಮತಗಳ ಮರು ಎಣಿಕೆ: ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಆವರಣದಲ್ಲೇ ನಡೆದ ಮರು ಮತಎಣಿಕೆ

- Advertisement -
- Advertisement -

ಅಪರೂಪದ ವಿದ್ಯಮಾನವೊಂದರಲ್ಲಿ ಮೊಟ್ಟ ಮೊದಲ ಬಾರಿಗೆ ಇವಿಎಂ ಯಂತ್ರಗಳನ್ನು ತರಿಸಿಕೊಂಡ ಸುಪ್ರೀಂ ಕೋರ್ಟ್, ತನ್ನ ಆವರಣದೊಳಗೇ ರಿಜಿಸ್ಟ್ರಾರ್ ಮೂಲಕ ಮರು ಮತಎಣಿಕೆ ನಡೆಸಿ, ಹರಿಯಾಣದ ಗ್ರಾಮ ಪಂಚಾಯತ್ ಒಂದರ ‘ಸರ್ಪಂಚ್’ ಚುನಾವಣೆಯ ಫಲಿತಾಂಶವನ್ನೇ ರದ್ದುಗೊಳಿಸಿದೆ.

ಮರು ಮತ ಎಣಿಕೆಯಲ್ಲಿ ಚುನಾವಣೆಯಲ್ಲಿ ಸೋತಿದ್ದರು ಎನ್ನಲಾಗಿದ್ದ ಅಭ್ಯರ್ಥಿ 51 ಹೆಚ್ಚು ಮತಗಳನ್ನು ಪಡೆದಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್, ಚುನಾವಣಾ ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಒಳಪಟ್ಟು, ಪಾಣಿಪತ್‌ನ ಉಪ ಆಯುಕ್ತ ಹಾಗೂ ಚುನಾವಣಾ ಅಧಿಕಾರಿಗೆ ಸೋತ ಅಭ್ಯರ್ಥಿ (ಅರ್ಜಿದಾರ) ಯನ್ನು ಗ್ರಾಮ ಪಂಚಾಯತ್‌ನ ಚುನಾಯಿತ ‘ಸರ್ಪಂಚ್’ ಎಂದು ಘೋಷಿಸುವ ಅಧಿಸೂಚನೆಯನ್ನು 2 ದಿನಗಳಲ್ಲಿ ಹೊರಡಿಸುವಂತೆ ನಿರ್ದೇಶಿಸಿದೆ.

ಅರ್ಜಿದಾರರು ಸದರಿ ಹುದ್ದೆಯನ್ನು ತಕ್ಷಣವೇ ವಹಿಸಿಕೊಳ್ಳಲು ಮತ್ತು ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಅರ್ಹರಾಗಿರುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

“ಈ ನ್ಯಾಯಾಲಯದ ರಿಜಿಸ್ಟ್ರಾರ್ (ಒಎಸ್‌ಡಿ) ಸಲ್ಲಿಸಿದ ವರದಿಯನ್ನು ಪ್ರಾಥಮಿಕವಾಗಿ ಅನುಮಾನಿಸಲು ಯಾವುದೇ ಕಾರಣಗಳಿಲ್ಲ. ವಿಶೇಷವಾಗಿ ಸಂಪೂರ್ಣ ಮರುಎಣಿಕೆಯನ್ನು ಸರಿಯಾಗಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಮತ್ತು ಅದರ ಫಲಿತಾಂಶಕ್ಕೆ ಪಕ್ಷಗಳ ಪ್ರತಿನಿಧಿಗಳು ಸಹಿ ಮಾಡಿದ್ದಾರೆ. ಮೇಲ್ಮನವಿದಾರರು 22.11.2022ರಂದು ನಡೆದ ಚುನಾವಣೆಯಲ್ಲಿ ಹರಿಯಾಣದ ಪಾಣಿಪತ್ ಜಿಲ್ಲೆಯ ಬುವಾನಾ ಲಖು ಗ್ರಾಮ ಪಂಚಾಯತ್‌ನ ಚುನಾಯಿತ ಸರ್ಪಂಚ್ ಎಂದು ಘೋಷಿಸಲು ಅರ್ಹರು ಎಂದು ನಾವು ತೃಪ್ತರಾಗಿದ್ದೇವೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ದೀಪಂಕರ್ ದತ್ತ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಆದೇಶಿಸಿದೆ.

ವಿಚಾರಣೆಯ ಸಮಯದಲ್ಲಿ ನ್ಯಾಯಮೂರ್ತಿ ಕಾಂತ್ ಅವರು, ಪ್ರತಿವಾದಿ ನಂ.1 (ಈ ಹಿಂದೆ ಆಯ್ಕೆಯಾಗಿದ್ದ ಅಭ್ಯರ್ಥಿ) ಅನ್ನು ದೂಷಿಸುವಂತಿಲ್ಲ. “ಈ ಎಲ್ಲಾ ಪ್ರಮಾದಗಳು ಕೇವಲ ಒಂದು ಮತಗಟ್ಟೆಯಲ್ಲಿ ಮಾತ್ರ ಸಂಭವಿಸಿವೆ. ಚುನಾವಣಾಧಿಕಾರಿ/ಎಣಿಕೆ ಅಧಿಕಾರಿ ಸಂಪೂರ್ಣ ಅವ್ಯವಸ್ಥೆ ಸೃಷ್ಟಿಸಿದ್ದಾರೆ. ಅವರೇ ಪ್ರಮಾದ ಎಸಗಿದ್ದಾರೆ. ಈ ರೀತಿಯ ವಿಷಯಗಳಲ್ಲಿ, ಒಂದೇ ಪರಿಹಾರವೆಂದರೆ, ಮರು ಎಣಿಕೆ ನಡೆಸುವುದು. ಹೈಕೋರ್ಟ್ ಮರುಎಣಿಕೆ ನಿರಾಕರಿಸಲು 15 ಪುಟಗಳ ವಿವರಣೆ ನೀಡುತ್ತದೆ ಎಂದು ನಾವು ಎಂದಿಗೂ ಭಾವಿಸಿರಲಿಲ್ಲ” ಎಂದು ಹೇಳಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಈ ಪ್ರಕರಣವು 2022ರಲ್ಲಿ ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರ್ಪಂಚ್ ಚುನಾವಣೆಗೆ ಸಂಬಂಧಿಸಿದೆ. ಆರಂಭದಲ್ಲಿ, ಪ್ರತಿವಾದಿ ನಂ.1-ಕುಲದೀಪ್ ಸಿಂಗ್ ಅವರನ್ನು ಚುನಾಯಿತರೆಂದು ಘೋಷಿಸಲಾಗಿತ್ತು. ಆದಾಗ್ಯೂ, ಅದೇ ದಿನ, ಚುನಾವಣಾಧಿಕಾರಿಯು ಒಂದು ಬೂತ್‌ನಲ್ಲಿ ಫಲಿತಾಂಶವನ್ನು ಸಿದ್ಧಪಡಿಸುವಲ್ಲಿನ ದೋಷದಿಂದಾಗಿ, ಸ್ವಯಂಪ್ರೇರಿತವಾಗಿ ಮತಗಳ ಮರುಎಣಿಕೆಗೆ ಆದೇಶಿಸಿದರು. ಫಲಿತಾಂಶವನ್ನು ಮರು ಎಣಿಕೆ ನಡೆಸಿದ ನಂತರ, ಅರ್ಜಿದಾರರಾದ ಮೋಹಿತ್ ಕುಮಾರ್ ಅವರನ್ನು ಚುನಾಯಿತರೆಂದು ಘೋಷಿಸಲಾಗಿತ್ತು.

ಇದರಿಂದ ಬೇಸತ್ತ ಕುಲದೀಪ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಕುಲದೀಪ್ ಸಿಂಗ್ ಪರವಾಗಿ ತೀರ್ಪು ನೀಡಿತ್ತು. ಅಭ್ಯರ್ಥಿಯೊಬ್ಬರು ಆಯ್ಕೆಯಾದ ನಂತರ, ಮತಗಳ ಮರು ಎಣಿಕೆಯ ಮೂಲಕ ಫಲಿತಾಂಶವನ್ನು ಸ್ವಯಂಪ್ರೇರಿತವಾಗಿ ಬದಲಾಯಿಸಲು ಸಾಧ್ಯವಿಲ್ಲ. ನೊಂದ ಪಕ್ಷಕ್ಕೆ ಲಭ್ಯವಿರುವ ಸೂಕ್ತ ಪರಿಹಾರವೆಂದರೆ ಚುನಾವಣಾ ತಕರಾರು ಅರ್ಜಿಯನ್ನು ಸಲ್ಲಿಸುವುದು ಎಂದು ಹೈಕೋರ್ಟ್ ಹೇಳಿತ್ತು. ಈ ದೃಷ್ಟಿಕೋನದಿಂದ, ಹೈಕೋರ್ಟ್ ಮೋಹಿತ್ ಕುಮಾರ್ ಅವರ ಆಯ್ಕೆಯನ್ನು ರದ್ದುಗೊಳಿಸಿ, ಕುಲದೀಪ್ ಸಿಂಗ್ ಅವರನ್ನು ಚುನಾಯಿತ ‘ಸರ್ಪಂಚ್’ ಎಂದು ಘೋಷಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ತರುವಾಯ, ಮೋಹಿತ್ ಕುಮಾರ್ ಚುನಾವಣಾ ತರಕಾರು ಅರ್ಜಿಯನ್ನು ಸಲ್ಲಿಸಿದ್ದರು. ಅದಕ್ಕೆ, ಕುಲದೀಪ್ ಸಿಂಗ್ ಮಿತಿಯ ಆಧಾರದ ಮೇಲೆ ಪ್ರಾಥಮಿಕ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದರು. ಬಳಿಕ ಈ ವಿಷಯವು ಸುಪ್ರೀಂ ಕೋರ್ಟ್‌ ತಲುಪಿತ್ತು. ಸುಪ್ರೀಂ ಕೋರ್ಟ್ ಕುಲದೀಪ್ ಸಿಂಗ್ ಅವರ ಆಕ್ಷೇಪಣೆಯನ್ನು ತಿರಸ್ಕರಿಸಿತ್ತು ಮತ್ತು ನಾಲ್ಕು ತಿಂಗಳೊಳಗೆ ಪ್ರಕರಣವನ್ನು ನಿರ್ಧರಿಸುವಂತೆ ಚುನಾವಣಾ ನ್ಯಾಯಮಂಡಳಿಗೆ ನಿರ್ದೇಶಿಸಿತ್ತು.

ಈ ವರ್ಷದ ಏಪ್ರಿಲ್‌ನಲ್ಲಿ, ಚುನಾವಣಾ ನ್ಯಾಯಮಂಡಳಿಯು ಒಂದು ಮತಗಟ್ಟೆಯ (ಬೂತ್ ಸಂಖ್ಯೆ 69) ಮತಗಳ ಮರು ಎಣಿಕೆ ಅಗತ್ಯವೆಂದು ತೀರ್ಪು ನೀಡಿತ್ತು. ಉಪ ಆಯುಕ್ತ ಹಾಗೂ ಚುನಾವಣಾ ಅಧಿಕಾರಿಗೆ ಮತಗಳನ್ನು ಮರು ಎಣಿಕೆ ಮಾಡುವಂತೆ ನಿರ್ದೇಶಿಸಲಾಗಿತ್ತು. ಆದಾಗ್ಯೂ, ಕುಲದೀಪ್ ಸಿಂಗ್ ಅವರ ಮೇಲ್ಮನವಿಯ ಮೇರೆಗೆ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದರಿಂದ ಬೇಸತ್ತ ಮೋಹಿತ್ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಜುಲೈನಲ್ಲಿ, ಸುಪ್ರೀಂ ಕೋರ್ಟ್ ಸಂಬಂಧಪಟ್ಟ ಇವಿಎಂಗಳನ್ನು ನಾಮನಿರ್ದೇಶಿತ ರಿಜಿಸ್ಟ್ರಾರ್ ಮುಂದೆ ಹಾಜರುಪಡಿಸಲು ಆದೇಶಿಸಿತ್ತು. ಅವರು ಬೂತ್ ಸಂಖ್ಯೆ 69 ಕ್ಕೆ ಮಾತ್ರವಲ್ಲದೆ ಎಲ್ಲಾ ಬೂತ್‌ಗಳಿಗೂ ಮತಗಳ ಮರುಎಣಿಕೆ ಮಾಡಬೇಕಾಗಿತ್ತು. ಮರುಎಣಿಕೆಯನ್ನು ವೀಡಿಯೊ ರೆಕಾರ್ಡ್ ಮಾಡಲು ಮತ್ತು ಪಕ್ಷಗಳ ಏಜೆಂಟರು ಹಾಜರಿರಲು ಅನುಮತಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಅವರನ್ನು ನಾಮನಿರ್ದೇಶನ ಮಾಡಲಾಗಿತ್ತು. ಅವರು 5 ಬೂತ್‌ಗಳ ಮತಗಳ ಮರುಎಣಿಕೆಯನ್ನು ನಡೆಸಿದ್ದರು. ಪರಿಷ್ಕೃತ ಫಲಿತಾಂಶದಲ್ಲಿ ಮೋಹಿತ್ ಕುಮಾರ್, ಕುಲದೀಪ್ ಸಿಂಗ್ ಗಿಂತ 51 ಮತಗಳನ್ನು ಹೆಚ್ಚು ಪಡೆದಿದ್ದಾರೆ ಎಂದು ರಿಜಿಸ್ಟ್ರಾರ್ ವರದಿ ಕೊಟ್ಟಿದ್ದರು.

ಆಗಸ್ಟ್ 11ರಂದು, ನ್ಯಾಯಾಲಯವು ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಲು ಮತ್ತು ಅರ್ಜಿದಾರರನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ವಿಚಾರಣೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಿತ್ತು. ಈ ನಡುವೆ, ಪ್ರತಿವಾದಿ ನಂ.1 ನ್ಯಾಯಮಂಡಳಿಯ ಮುಂದೆ ಕೆಲವು ಇತರ ವಿಷಯಗಳು ಇನ್ನೂ ಇತ್ಯರ್ಥವಾಗಬೇಕಿದೆ ಎಂದು ವಾದಿಸಿದ್ದರಿಂದ, ಪಕ್ಷಗಳು ತಮ್ಮ ಸಮಸ್ಯೆಗಳು, ಯಾವುದಾದರೂ ಇದ್ದರೆ, ನ್ಯಾಯಮಂಡಳಿಯ ಮುಂದೆ ವಿವರಿಸಲು ಸ್ವಾತಂತ್ರ್ಯ ಹೊಂದಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಅದೇ ಸಮಯದಲ್ಲಿ, ಮತಗಳ ಮರುಎಣಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ನ್ಯಾಯಮಂಡಳಿಯು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್‌ರ ವರದಿಯನ್ನು ಅಂತಿಮ ಮತ್ತು ನಿರ್ಣಾಯಕವೆಂದು ಸ್ವೀಕರಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶವನ್ನು ಬದಿಗಿಟ್ಟು, ಅರ್ಜಿದಾರರು ಸರ್ಪಂಚ್ ಆಗಿ ಘೋಷಿಸುವುದು ನ್ಯಾಯಮಂಡಳಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದಿದೆ.

ಗುಜರಾತ್‌| ಮೀಸೆ ಬಿಟ್ಟಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ತಲೆಮರೆಸಿಕೊಂಡ ಐವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...