Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...