Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...