Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...