Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...