Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...