Homeಮುಖಪುಟಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

ಹಾಲಿ ಇರುವ ಒಬಿಸಿ, EWS ಕೋಟಾದಡಿ ಈ ವರ್ಷದ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಸುಪ್ರೀಂ ಅನುಮತಿ

- Advertisement -
- Advertisement -

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು 2021-22ನೇ ವರ್ಷಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯ ಮಾಡಿದ್ದು, ಕೌನ್ಸೆಲಿಂಗ್‌ಗೆ ಅನುವು ಮಾಡಿಕೊಟ್ಟಿದೆ.

ಪಾಂಡೆ ಸಮಿತಿಯು ನಿಗದಿಪಡಿಸಿದ EWS ಮಾನದಂಡಗಳ ಸಿಂಧುತ್ವವನ್ನು ಪರೀಕ್ಷಿಸಲು ನ್ಯಾಯಾಲಯ ನಿರ್ಧರಿಸಿದ್ದು, ಮಾರ್ಚ್ ಮೂರನೇ ವಾರದಲ್ಲಿ ಅರ್ಜಿಗಳ ವಿಚಾರಣೆಗೆ ಪಟ್ಟಿಮಾಡಿದೆ. ಗುರುವಾರ ತನ್ನ ಆದೇಶ ನೀಡುವಾಗ ರಾಷ್ಟ್ರೀಯ ಹಿತಾಸಕ್ತಿಯಿಂದ ಕೌನ್ಸೆಲಿಂಗ್ ಪ್ರಾರಂಭವಾಗುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿನ ವಿಳಂಬದ ವಿರುದ್ಧ ಇತ್ತೀಚಿಗೆ ದೇಶದ ಹಲವಾರು ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ನಿವಾಸಿ ವೈದ್ಯರಿಂದ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯಲ್ಲಿ ಒಂದು ವಾರಗಳ ಕಾಲ ನಡೆದ ಪ್ರತಿಭಟನೆಯು ಪೊಲೀಸ್ ಮಧ್ಯಪ್ರವೇಶದಿಂದ ಹಿಂಸಾಚಾರಕ್ಕೆ ತಿರುಗಿತ್ತು. ಡಿಸೆಂಬರ್ 31 ರಂದು ಸರ್ಕಾರದ ಭರವಸೆಯ ನಂತರ ಆಂದೋಲನ ಹಿಂಪಡೆಯಲಾಯಿತು.

ಏನಿದು ವಿವಾದ?

ಸ್ನಾತಕೋತ್ತರ ವೈದ್ಯಕೀಯ (ಪಿ.ಜಿ) ಕೋರ್ಸ್‌ಗೆ ನೀಟ್ ಮೂಲಕ ಪ್ರವೇಶಾತಿಗೆ EWS ವರ್ಗಕ್ಕೆ ಶೇ.10 ಮತ್ತು ಒಬಿಸಿಗೆ ಶೇ.27ರಷ್ಟು ಮೀಸಲಾತಿ ನಿಗದಿಗೊಳಿಸಿರುವುದನ್ನು ಮತ್ತು 8 ಲಕ್ಷ ಆದಾಯ ಮಿತಿ ನಿಗದಿ ಮಾಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಹಲವರು ಪ್ರಶ್ನಿಸಿದ್ದಾರೆ. ಈ ಎಲ್ಲ ಅರ್ಜಿಗಳನ್ನು ಒಟ್ಟಿಗೆ ಆಲಿಸುತ್ತಿರುವ ಜಸ್ಟೀಸ್ ಡಿ.ವೈ ಚಂದ್ರಚೂಡ್, ಸೂರ್ಯಕಾಂತ್ ಮತ್ತು ವಿಕ್ರಂ ನಾಥ್‌ರವರನ್ನೊಳಗೊಂಡ ಪೀಠ ಈ EWS ವರ್ಗಕ್ಕೆ 8 ಲಕ್ಷ ಆದಾಯ ಮಿತಿಯ ಮಾನದಂಡವನ್ನು ಹೇಗೆ ನಿರ್ಧರಿಸಿದ್ದೀರಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

ಅಲ್ಲದೆ, ‘ಒಬಿಸಿಗಳಿಗೂ ಸಹ 8 ಲಕ್ಷ ರೂ.ಗಳು ’ಕ್ರೀಮಿ ಲೇಯರ್’ ಮಾನದಂಡವಾಗಿದೆ. ಆದರೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕ ಹಿಂದುಳಿದಿಲ್ಲದಿರುವ EWS ವರ್ಗಕ್ಕೂ ಅದೇ ಮಾನದಂಡವನ್ನು ಹೇಗೆ ಅಳವಡಿಸಲು ಸಾಧ್ಯ?’ ಎಂದು ಪೀಠವು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಕೇಂದ್ರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ’ಈ ಆದಾಯ ಮಿತಿಯನ್ನು ಪರಿಷ್ಕರಿಸುತ್ತೇವೆ ಮತ್ತು ಅದಕ್ಕಾಗಿ ಸಮಿತಿ ರಚನೆ ಮಾಡುತ್ತೇವೆ, ನಾಲ್ಕು ವಾರಗಳ ಸಮಯಾವಕಾಶ ಕೊಡಿ ಎಂದು ಕೋರಿದ್ದಾರೆ’. ಅಲ್ಲಿಯವರೆಗೂ ಪಿ.ಜಿ ಕೌನ್ಸೆಲಿಂಗ್‌ಅನ್ನು ಮುಂದೂಡಬೇಕೆಂದು ಕೋರ್ಟ್ ಹೇಳಿತ್ತು.

ಇದೇ ವಿಷಯ ಕುರಿತು ಅಕ್ಟೋಬರ್‌ನಲ್ಲಿ ಜಸ್ಟೀಸ್ ಡಿ.ವೈ ಚಂದ್ರಚೂಡ್‌ರವರು, “ನೀವು (ಕೇಂದ್ರ ಸರ್ಕಾರ) ಈ 8 ಲಕ್ಷ ರೂಗಳ ಆದಾಯ ಮಿತಿಯನ್ನು ಏಕಾಏಕಿ ಶೂನ್ಯದಿಂದ ತಂದು ಹೇಳಲು ಸಾಧ್ಯವಿಲ್ಲ. ಅದಕ್ಕಾಗಿ ಜನಸಂಖ್ಯೆ ಮತ್ತು ಸಾಮಾಜಿಕ ಸ್ಥಿತಿಗತಿಯ ಅಧ್ಯಯನ ಅಥವಾ ಆರ್ಥಿಕ-ಸಾಮಾಜಿಕ ಡೇಟಾ ಹೊಂದಿರಬೇಕು. ರೂ. 8 ಲಕ್ಷದ ಮಿತಿಯನ್ನು ಅನ್ವಯಿಸುವ ಮೂಲಕ ನೀವು ಸಮಾಜದಲ್ಲಿನ ಅಸಮಾನತೆಯನ್ನು ಮರೆಮಾಚಿ ಎಲ್ಲರೂ ಸಮಾನರನ್ನಾಗಿ ಬಿಂಬಿಸುತ್ತಿದ್ದೀರಿ” ಎಂದು ಕಿಡಿಕಾರಿದ್ದರು. ಒಬಿಸಿ ಸಮುದಾಯವು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ EWS ಸಮುದಾಯವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದರು.

ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರಾದ ಅರವಿಂದ್ ದಾತರ್‌ರವರು ಮಾಸಿಕ 70 ಸಾವಿರ ಸಂಬಳ ಪಡೆಯುವವರನ್ನು EWS ಎಂದು ಹೇಗೆ ಕರೆಯಬಹುದು ಎಂಬ ಅಹವಾಲು ಸಲ್ಲಿಸಿದ್ದಾರೆ. ಇದನ್ನು ಜನವರಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಪೀಠ ತಿಳಿಸಿತ್ತು.


ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...