Homeಅಂಕಣಗಳುಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

ಗಂಡಾಳಿಕೆಯನ್ನು ಬಿಂಬಿಸುವ ಕೋರ್ಟುಗಳಿಗೆ ’ಸುಪ್ರೀಮ್’ ಕಡಿವಾಣ

- Advertisement -
- Advertisement -

ಹೆಣ್ಣುಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಕ್ಷುಲ್ಲಕಗೊಳಿಸುವ ಗಂಡಾಳಿಕೆಯ ಧೋರಣೆಗಳಿಂದ ನ್ಯಾಯಾಲಯಗಳೂ ಮುಕ್ತವಲ್ಲ.

ನ್ಯಾಯಾಧೀಶರ ಪೂರ್ವಗ್ರಹವನ್ನು ಬಿಂಬಿಸುವ ಇಲ್ಲವೇ ಹೆಣ್ಣುಮಕ್ಕಳ ಘನತೆಯನ್ನು ಕುಂದಿಸುವ ಅಥವಾ ನ್ಯಾಯಯುತ ವಿಚಾರಣೆಯ ಮೇಲೆ ಅಡ್ಡ ಪರಿಣಾಮ ಬೀರುವ ಟೀಕೆ ಟಿಪ್ಪಣಿಗಳು ಸರ್ವೇಸಾಮಾನ್ಯ ಆಗಿ ಹೋಗಿವೆ. ಅತ್ಯಾಚಾರಕ್ಕೆ ಈಡಾದ ಹೆಣ್ಣುಮಗಳು ’ಸಡಿಲ ನಡತೆಯವಳು’ ಅಥವಾ ’ಲೈಂಗಿಕ ಕ್ರಿಯೆಗಳ ಅಭ್ಯಾಸವಿರುವವಳು’ ಎಂಬ ವಾದವನ್ನು ಪುರಸ್ಕರಿಸಿ ಆರೋಪಿ ಗಂಡಸಿಗೆ ಜಾಮೀನು ನೀಡಿರುವ ಪ್ರಕರಣಗಳಿಗೆ ಲೆಕ್ಕವಿಲ್ಲ. ಆರೋಪಿ ಮತ್ತು ಹಲ್ಲೆಗೀಡಾದ ಹೆಣ್ಣುಮಗಳ ನಡುವೆ ಮಧ್ಯಸ್ಥಿಕೆ, ಒಡಂಬಡಿಕೆ- ವಿವಾಹ ಏರ್ಪಡಿಸಿ ಅತ್ಯಾಚಾರದಂತಹ ಹೀನ ಅಪರಾಧದ ತೀವ್ರತೆಯನ್ನು ತಗ್ಗಿಸಿ ಕ್ಷುಲ್ಲಕಗೊಳಿಸಲಾಗುತ್ತಿದೆ.

ತನ್ನ ಇಚ್ಛೆಗೆ ವಿರುದ್ಧವಾಗಿ ಮೇಲೆರಗಿ ಉಲ್ಲಂಘಿಸಿದವನನ್ನೇ ಗಂಡನನ್ನಾಗಿ ಕಟ್ಟಿಕೊಳ್ಳುವ ಮತ್ತೊಂದು ಬಲಾತ್ಕಾರವನ್ನು ವ್ಯವಸ್ಥೆಯು ಹೆಣ್ಣಿನ ಮೇಲೆ ಎಸಗತೊಡಗಿದೆ.

ಮನುಧರ್ಮಶಾಸ್ತ್ರವು ನರನಾಡಿಗಳಲ್ಲಿ ನೆಲೆಗೊಂಡಿರುವ ಭಾರತ ಭೂಮಿಯಲ್ಲಿ ಗಂಡಾಳಿಕೆಯ ವಿಕೃತಿಗಳು ಹೆಣ್ಣು ಮೈ-ಮನಗಳನ್ನು ಬಗೆಬಗೆಯ ಕ್ರೌರ್ಯಗಳಿಗೆ ಗುರಿ ಮಾಡಿವೆ. ಹಲ್ಲೆಗೆ ಅನ್ಯಾಯಕ್ಕೆ ಬಲಿಯಾದ ಆಕೆಯನ್ನೇ ಆರೋಪಿಯಂತೆ ಕಾಣಲಾಗುತ್ತಿದೆ. ನ್ಯಾಯ ಪಡೆಯುವ ಪ್ರಕ್ರಿಯೆಯೇ ಆಕೆಯ ಪಾಲಿಗೆ ಚಿತ್ರಹಿಂಸೆಯಾಗಿ ಪರಿಣಮಿಸಿದೆ.

ಅಪರ್ಣಾ ಭಟ್ ಮತ್ತಿತರರು ಈ ಪ್ರವೃತ್ತಿಯನ್ನು ಪ್ರಶ್ನಿಸಿದ್ದ ಪ್ರಕರಣದಲ್ಲಿ ಸುಪ್ರೀಮ್ ಕೋರ್ಟು ಇತ್ತೀಚೆಗೆ ನೀಡಿರುವ ತೀರ್ಪು ಕಣ್ಣು ತೆರೆಸುವಂತಹುದು.

ಲೈಂಗಿಕ ಅಪರಾಧಗಳ ವಿಚಾರಣೆಯಲ್ಲಿ ಕೋರ್ಟುಗಳು ಸೂಕ್ಷ್ಮ ಸಂವೇದನಾಶೀಲತೆಯನ್ನು ತೋರುವಂತೆ ತಾಕೀತು ಮಾಡಿದೆ. ಜಾಮೀನು ನೀಡುವಾಗ ಪಾಲಿಸಲೇಬೇಕಾದ ಏಳು ಪ್ರಮುಖ ನಿರ್ದೇಶನಗಳನ್ನು ದೇಶದ ಎಲ್ಲ ಹೈಕೋರ್ಟುಗಳು ಮತ್ತು ಅಧೀನ ನ್ಯಾಯಾಲಯಗಳಿಗೆ ವಿಧಿಸಿದೆ.

1. ಆರೋಪಿಗೆ ಜಾಮೀನು ನೀಡುವಾಗ ಆರೋಪಿ ಮತ್ತು ಸಂತ್ರಸ್ತೆಯ ನಡುವೆ ಸಂಪರ್ಕ ಏರ್ಪಡುವಂತಹ ಯಾವ ಷರತ್ತನ್ನೂ ಹಾಕಬಾರದು. ಬದಲಾಗಿ ನ್ಯಾಯಾಲಯ ವಿಧಿಸುವ ಷರತ್ತುಗಳು ಆರೋಪಿಯಿಂದ ಫಿರ್ಯಾದುದಾರಳನ್ನು ಮತ್ತಷ್ಟು ಕಿರುಕುಳದಿಂದ ರಕ್ಷಿಸುವಂತಿರಬೇಕು.

2. ಸಂತ್ರಸ್ತೆಗೆ ಆರೋಪಿಯಿಂದ ಕಿರುಕುಳದ ಅಪಾಯವಿದೆ ಎಂದು ನ್ಯಾಯಾಲಯಕ್ಕೆ ಅನಿಸಿದರೆ ಅಥವಾ ಅಂತಹ ಸಂದೇಹ ವ್ಯಕ್ತವಾದರೆ ಆಕೆಯ ರಕ್ಷಣೆಗೆ ಸೂಕ್ತ ಆದೇಶ ನೀಡಬೇಕು. ಆಕೆಯ ಸಂಪರ್ಕ ಬೆಳೆಸದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

3. ಆರೋಪಿಗೆ ಜಾಮೀನು ಮಂಜೂರಾದಲ್ಲಿ, ತಕ್ಷಣವೇ ಆ ಕುರಿತು ಸಂತ್ರಸ್ತೆಗೆ ತಿಳಿಯಪಡಿಸಬೇಕು.

4. ಜಾಮೀನಿನ ಷರತ್ತುಗಳು ಮತ್ತು ಆದೇಶಗಳು ಮಹಿಳೆಯರ ಕುರಿತು ಸಮಾಜದಲ್ಲಿ ನೆಲೆಸಿರುವ ರೂಢಿಗತ ಮತ್ತು ಗಂಡಾಳಿಕೆಯ ಧೋರಣೆಗಳನ್ನು ಬಿಂಬಿಸಕೂಡದು. ಈ ಷರತ್ತು-ಆದೇಶಗಳು ಭಾರತೀಯ ಅಪರಾಧ ಸಂಹಿತೆಗೆ ಅನುಗುಣವಾಗಿರತಕ್ಕದ್ದು. ಸಂತ್ರಸ್ತೆಯ ಉಡುಗೆ ತೊಡುಗೆ, ವರ್ತನೆ, ಹಳೆಯ ನಡತೆ ಅಥವಾ ಆಕೆಯ ನೈತಿಕ ಮೌಲ್ಯಗಳ ಕುರಿತ ಯಾವುದೇ ಮಾತುಗಳಿಗೆ ಆದೇಶಗಳಲ್ಲಾಗಲಿ, ಷರತ್ತುಗಳಲ್ಲಾಗಲಿ ಅವಕಾಶ ಇಲ್ಲ.

5. ಲಿಂಗ ಸಂಬಂಧಿ ಅಪರಾಧ ಪ್ರಕರಣಗಳಲ್ಲಿ ನ್ಯಾಯ ನೀಡುವಾಗ ಸಂತ್ರಸ್ತೆ ಮತ್ತು ಆರೋಪಿಯ ನಡುವೆ ರಾಜಿಸಂಧಾನ ಅಥವಾ ಲಗ್ನವಾಗುವಂತೆ ಮನವೊಲಿಸುವ ಸಲಹೆ ಸೂಚನೆಗಳನ್ನು ನೀಡಕೂಡದು. ಇಂತಹ ನಡೆಗಳು ನ್ಯಾಯಾಲಯಗಳ ಅಧಿಕಾರ ವ್ಯಾಪ್ತಿಯನ್ನು ಮೀರಿದಂತಹವು.

6. ವಿಚಾರಣೆ ಮತ್ತು ವಾದಮಂಡನೆಯ ಕಲಾಪಗಳಲ್ಲಿ ಸಂತ್ರಸ್ತೆಗೆ ಮನೋಯಾತನೆ ಉಂಟು ಮಾಡುವಂತಹ ಯಾವುದೇ ಮಾತುಗಳಿಗೆ ಅವಕಾಶ ನೀಡಕೂಡದು. ಅಂತಹ ಸೂಕ್ಷ್ಮ ಸಂವೇದನೆಯನ್ನು ನ್ಯಾಯಾಧೀಶರು ಸದಾ ಹೊಂದಿರತಕ್ಕದ್ದು.

7. ವಿಶೇಷವಾಗಿ ಸಂತ್ರಸ್ತೆಯ ಆತ್ಮವಿಶ್ವಾಸವನ್ನು ಕುಂದಿಸುವ ಇಲ್ಲವೇ ಕದಲಿಸುವಂತಹ ಯಾವುದೇ ಪದಗಳನ್ನು ಮಾತಿನಲ್ಲಾಗಲಿ, ಬರೆಹದಲ್ಲಾಗಲಿ ನ್ಯಾಯಾಧೀಶರು ಬಳಸತಕ್ಕದ್ದಲ್ಲ.

PC : DNA India

ನ್ಯಾಯನಿರ್ಣಯ ಮಾಡುವಾಗ ನ್ಯಾಯಾಲಯಗಳು ಈ ಕೆಳಕಂಡ ರೂಢಿಗತ ಧೋರಣೆಗಳನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ದೂರವಿಡುವಂತೆಯೂ ಸುಪ್ರೀಮ್ ಕೋರ್ಟು ನಿರ್ದೇಶನ ನೀಡಿದೆ:

1. ಮಹಿಳೆ ದೈಹಿಕವಾಗಿ ದುರ್ಬಲಳು.

2. ಹೆಣ್ಣುಮಕ್ಕಳು ಸ್ವಂತ ನಿರ್ಧಾರ ಮಾಡಲಾರರು.

3. ಪುರುಷರೇ ಮನೆಯ ಮುಖ್ಯಸ್ಥರು ಮತ್ತು ಕುಟುಂಬಕ್ಕೆ ಸಂಬಂಧಿಸಿದ ಎಲ್ಲ ತೀರ್ಮಾನಗಳನ್ನು ಅವರೇ ತೆಗೆದುಕೊಳ್ಳಬೇಕು.

4. ಮಹಿಳೆಯರು ವಿಧೇಯರಾಗಿಯೂ ಅಡಿಯಾಳಾಗಿಯೂ ಇರತಕ್ಕದ್ದು.

5. ಲೈಂಗಿಕ ಪರಿಶುದ್ಧಿಯನ್ನು ಹೊಂದಿದವರೇ ಒಳ್ಳೆಯ ಹೆಣ್ಣುಮಕ್ಕಳು.

6. ತಾಯಿಯಾಗುವುದು ಪ್ರತಿಯೊಬ್ಬ ಹೆಣ್ಣಿನ ಕರ್ತವ್ಯ ಮತ್ತು ಪಾತ್ರ. ಪ್ರತಿಯೊಬ್ಬ ಹೆಣ್ಣೂ ತಾಯಿ ಆಗಬಯಸುವಳು.

7. ಮಕ್ಕಳ ಪಾಲನೆ ಪೋಷಣೆಗೆ ಮಹಿಳೆಯೇ ಬಾಧ್ಯಸ್ಥಳು.

8. ರಾತ್ರಿ ವೇಳೆ ಒಬ್ಬಳೇ ಇರುವ ಅಥವಾ ನಿರ್ದಿಷ್ಟ ಉಡುಪುಗಳನ್ನು ತೊಡುವುದು ಮಹಿಳೆಯ ಮೇಲಿನ ಹಲ್ಲೆಗಳಿಗೆ ಕಾರಣ.

9. ಮದ್ಯಪಾನ ಮತ್ತು ಧೂಮಪಾನ ಮಾಡುವ ಹೆಣ್ಣುಮಗಳು ತನ್ನ ಮೇಲೆ ಪುರುಷರು ನಡೆಸುವ ಹಲ್ಲೆಗಳಿಗೆ ಖುದ್ದು ಬಾಧ್ಯಸ್ಥಳು. ಇಂತಹ ಹಲ್ಲೆಗಳನ್ನು ಆಕೆ ತಾನಾಗಿ ಆಹ್ವಾನಿಸುತ್ತಾಳೆ.

10. ಮಹಿಳೆಯರು ಭಾವುಕರು. ಬಹುತೇಕ ಅತಿಯಾಗಿ ಪ್ರತಿಕ್ರಿಯಿಸುವರು ಹೀಗಾಗಿ ಅವರ ಹೇಳಿಕೆಗಳಿಗೆ ಪುಷ್ಟೀಕರಣ ಬೇಕು.

11. ಲೈಂಗಿಕವಾಗಿ ಸಕ್ರಿಯರಾಗಿರುವ ಮಹಿಳೆಯರು ಲೈಂಗಿಕ ಹಲ್ಲೆಯ ಪ್ರಕರಣಗಳಲ್ಲಿ ತಾವು ಒಪ್ಪಿಗೆ ಕೊಟ್ಟಿರಲಿಲ್ಲ ಎಂಬುದಾಗಿ ನೀಡುವ ಸಾಕ್ಷ್ಯವನ್ನು ಅನುಮಾನದಿಂದ ನೋಡಬೇಕು.

12. ಲೈಂಗಿಕ ಅಪರಾಧದ ಪ್ರಕರಣಗಳಲ್ಲಿ ದೈಹಿಕ ದಾಳಿಯ ಸಾಕ್ಷ್ಯಗಳು ಇಲ್ಲದೆ ಹೋದಲ್ಲಿ ಶಾರೀರಿಕ ಸಂಬಂಧಕ್ಕೆ ಆಕೆ ಒಪ್ಪಿಗೆ ನೀಡಿದ್ದಳು ಎಂದೇ ಅರ್ಥ.

ಈ ಮೇಲಿನ ಧೋರಣೆಗಳನ್ನು ದೂರವಿಟ್ಟು ಎಲ್ಲ ನಿರ್ದೇಶನಗಳನ್ನು ಅಳವಡಿಸಿದ ಲಿಂಗಸೂಕ್ಷ್ಮತೆಯ ಮಾದರಿಯನ್ನು ತಯಾರಿಸಬೇಕು. ಅದನ್ನು ನ್ಯಾಯಾಧೀಶರಿಗೆ ನೀಡುವ ಮೂಲತರಬೇತಿಯಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಮೂರು ತಿಂಗಳ ಒಳಗಾಗಿ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಯು ತ್ವರಿತವಾಗಿ ಈ ತರಬೇತಿ ಪಠ್ಯವನ್ನು ಸಮಾಜಶಾಸ್ತ್ರಜ್ಞರು, ಮನಶ್ಯಾಸ್ತ್ರಜ್ಞರು ಹಾಗೂ ಲಿಂಗ ಅಧ್ಯಯನ ತಜ್ಞರ ಜೊತೆ ಸಮಾಲೋಚಿಸಿ ರೂಪಿಸಬೇಕು ಎಂದು ಸುಪ್ರೀಮ್ ಕೋರ್ಟ್ ವಿಧಿಸಿದೆ.

ಇದೇ ರೀತಿ ಕಾನೂನು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ (ಎಲ್‌ಎಲ್‌ಬಿ) ವ್ಯಾಸಂಗದ ಭಾಗವಾಗಿ ಈ ಸಂಗತಿಗಳನ್ನು ಕಲಿಸತಕ್ಕದ್ದು. ಅಖಿಲ ಭಾರತ ವಕೀಲ ಪರೀಕ್ಷೆಯ ಪಠ್ಯದಲ್ಲಿ ಲೈಂಗಿಕ ಅಪರಾಧಗಳು ಮತ್ತು ಲಿಂಗಸೂಕ್ಷ್ಮತೆ ಕುರಿತ ವಿಷಯಗಳನ್ನು ಕಡ್ಡಾಯವಾಗಿ ಅಳವಡಿಸತಕ್ಕದ್ದು ಎಂದು ಬಾರ್ ಕೌನ್ಸಿಲ್ ಅಫ್ ಇಂಡಿಯಾಗೆ ಸೂಚಿಸಲಾಗಿದೆ.

ಲೈಂಗಿಕ ಅಪರಾಧಗಳ ಕುರಿತು ನ್ಯಾಯಾಧೀಶರು ಹೊಂದಬೇಕಿರುವ ಸೂಕ್ಷ್ಮ ಸಂವೇದನೆಯ ಬಗೆಗೆ ತಜ್ಞರೊಂದಿಗೆ ಎಲ್ಲ ಹೈಕೋರ್ಟುಗಳು ಸಮಾಲೋಚಿಸಿ ನ್ಯಾಯಾಂಗ ಸೇವೆಗಳ ಪರೀಕ್ಷೆಗಳಿಗೆ ಓದಿಕೊಳ್ಳಬೇಕಿರುವ ಪಠ್ಯದಲ್ಲಿ ಅಳವಡಿಸಬೇಕು ಎಂದೂ ಸುಪ್ರೀಮ್ ಕೋರ್ಟು ತಾಕೀತು ಮಾಡಿದೆ.

ಮಾನವೀಯವೂ ಪ್ರಗತಿಪರವೂ ಆಗಿರುವ ಅನೇಕ ತೀರ್ಪುಗಳನ್ನು ವ್ಯವಸ್ಥೆಯು ನುಂಗಿ ಹಾಕಿರುವುದುಂಟು. ಹಾಲಿ ತೀರ್ಪಿಗೆ ಅಂತಹ ದುರ್ಗತಿ ಒದಗದಿರಲಿ.


ಇದನ್ನೂ ಓದಿ: ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...