Homeಮುಖಪುಟಗುಜರಾತ್ ಹೈಕೋರ್ಟ್ ತೀರ್ಪಿಗೆ ಬ್ರೇಕ್ ಹಾಕಿದ ಸುಪ್ರೀಂ; ತೀಸ್ತಾ ಸೆಟಲ್ವಾಡ್‌ಗೆ ತಾತ್ಕಾಲಿಕ ರಿಲೀಫ್

ಗುಜರಾತ್ ಹೈಕೋರ್ಟ್ ತೀರ್ಪಿಗೆ ಬ್ರೇಕ್ ಹಾಕಿದ ಸುಪ್ರೀಂ; ತೀಸ್ತಾ ಸೆಟಲ್ವಾಡ್‌ಗೆ ತಾತ್ಕಾಲಿಕ ರಿಲೀಫ್

- Advertisement -
- Advertisement -

ನ್ಯಾಯಾಲಯಕ್ಕೆ ಕೂಡಲೇ ಶರಣಾಗುವಂತೆ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಗುಜರಾತ್ ಹೈಕೋರ್ಟ್ ಶನಿವಾರ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಒಂದು ವಾರದ ಮಟ್ಟಿಗೆ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ ಮತ್ತು ದೀಪಂಕರ್ ದತ್ತ ಅವರಿದ್ದ ತ್ರಿಸದಸ್ಯ ಪೀಠವು, ಸಂಜೆ ವಿಭಾಗೀಯ ಪೀಠ ನಡೆಸಿದ್ದ ವಿಚಾರಣೆಯನ್ನು ಅವಲೋಕಿಸಿ ಈ ಆದೇಶ ಪ್ರಕಟಿಸಿದೆ. ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಅಭಯ್‌ ಎಸ್. ಓಕಾ ಮತ್ತು ಮತ್ತು ಪ್ರಶಾಂತ್‌ ಕುಮಾರ್ ಮಿಶ್ರಾ ಅವರು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿದ್ದರು.

ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ 7 ದಿನಗಳ ಮಧ್ಯಂತರ ರಕ್ಷಣೆ ನೀಡಿದೆ. ಈ ಮೂಲಕ ತೀಸ್ತಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ವಿಚಾರಣೆಯ ಸಂದರ್ಭದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ತ್ರಿಸದಸ್ಯ ಪೀಠವು ,ಸುಪ್ರೀಂ ಕೋರ್ಟ್ ನಲ್ಲಿ ಗುಜರಾತ್ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಜಾಮೀನು ಅರ್ಜಿ ತಿರಸ್ಕರಿಸಿರುವ ಬಗ್ಗೆ ಪ್ರಶ್ನೆ ಮಾಡಿತು. ಜಾಮೀನು ಪ್ರಶ್ನಿಸಲು ವ್ಯಕ್ತಿಗೆ ಏಳು ದಿನಗಳ ಕಾಲಾವಕಾಶವನ್ನು ನೀಡಬಾರದು, ತುರ್ತಾಗಿ ಶರಣಾಗಬೇಕು ಎಂದಿದ್ದೀರಿ, ಒಬ್ಬ ವ್ಯಕ್ತಿ ಇಷ್ಟು ದಿನ ಹೊರಗೆ ಇದ್ದಾಗ ಮಧ್ಯಂತರ ರಕ್ಷಣೆಯನ್ನು ನೀಡಿದರೆ ಆಕಾಶವು ಕುಸಿಯುತ್ತದೆಯೇ.? ಹೈಕೋರ್ಟ್ ಏನು ಮಾಡುತ್ತಿದೆ? ಅಂತಹ ಅವಸರವೇನು? ಎಂದು ಪೀಠ ಪ್ರಶ್ನಿಸಿತು.

ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ತೀಸ್ತಾ ಸೆತಲ್ವಾಡ್ ಮಧ್ಯಂತರ ರಕ್ಷಣೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ಅರ್ಜಿ ಸಲ್ಲಿಕೆ ಹಿನ್ನಲೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿ, 7 ದಿನಗಳ ಕಾಲ ಮಧ್ಯಂತರ ರಕ್ಷಣೆ ನೀಡಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿನ ಆಧಾರದಲ್ಲಿ ಅರ್ಜಿದಾರರು ಈಗಾಗಲೇ ಹೊರಗೆ ಇರುವುದರಿಂದ, ಅವರು ಈ ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಆದೇಶಿಸಿದ್ದರು. ತೀಸ್ತಾ ಬಗ್ಗೆ ಮೃದು ಧೋರಣೆ ತಾಳಿದರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲವೂ ಮೃದುವಾಗಿರುತ್ತದೆ ಎಂಬ ತಪ್ಪು ಸಂದೇಶ ಹೋಗುವ ಸಾಧ್ಯತೆ ಇರುತ್ತದೆ ಎಂದು ತಮ್ಮ ಆದೇಶವನ್ನು ಸಮರ್ಥಿಸಿಕೊಂಡರು.

ಏನಿದು ಪ್ರಕರಣ?

2002ರ ಗುಜರಾತ್‌ ಗಲಭೆ ಪ್ರಕರಣದಲ್ಲಿ ಮುಗ್ಧ ಜನರನ್ನು ಸಾಕ್ಷ್ಯಗಳಾಗಿ ತಯಾರು ಮಾಡಿದ ಆರೋಪ ಮೇಲೆ ತೀಸ್ತಾ, ನಿವೃತ್ತ ಪೊಲೀಸ್‌ ಅಧಿಕಾರಿ ಆರ್.ಬಿ. ಶ್ರೀಕುಮಾರ್ ಸೇರಿದಂತೆ ಇತರರ ವಿರುದ್ಧ ಗುಜರಾತ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತೀಸ್ತಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದರ ಅವಧಿ ಮುಗಿದಿದ್ದರಿಂದ ಕೋರ್ಟ್‌ಗೆ ಶರಣಾಗುವಂತೆ ಹೈಕೋರ್ಟ್ ಸೂಚಿಸಿತ್ತು. ಹಾಗಾಗಿ, ತ್ವರಿತವಾಗಿ ಜಾಮೀನಿನ ವಿಚಾರಣೆ ನಡೆಸುವಂತೆ ತೀಸ್ತಾ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಅವರ ಸೂಚನೆ ಮೇರೆಗೆ ನ್ಯಾಯಾಲಯದ ಕಲಾಪ ಮುಗಿದ ಬಳಿಕ ಸಂಜೆ 6.30ಕ್ಕೆ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಈ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿ ವಿಸ್ತ್ರತ ಪೀಠಕ್ಕೆ ಜಾಮೀನು ಅರ್ಜಿಯನ್ನು ವರ್ಗಾಯಿಸಿತ್ತು. ‘ತೀಸ್ತಾಗೆ ಶರಣಾಗಲು ಹೈಕೋರ್ಟ್‌ ಸ್ವಲ್ಪ ಕಾಲಾವಕಾಶ ನೀಡಬೇಕಿತ್ತು’ ಎಂದು ನ್ಯಾಯಮೂರ್ತಿ ಓಕಾ ಹೇಳಿದರು.

ಸರ್ಕಾರದ ವಾದವೇನು?: ಗುಜರಾತ್‌ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮಡ್ತಾ, ‘ಸರ್ಕಾರದ ವಿರುದ್ಧ ತೀಸ್ತಾ ಅವರು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಅವರು ಮಧ್ಯಂತರ ಜಾಮೀನಿಗೂ ಅರ್ಹರಿಲ್ಲ’ ಎಂದು ವಾದಿಸಿದರು.

ಹಿರಿಯ ವಕೀಲ ಚಂದರ್‌ ಉದಯ್ ಸಿಂಗ್ ಮತ್ತು ವಕೀಲರಾದ ಅರ್ಪಣಾ ಭಟ್ ಅವರು, ತೀಸ್ತಾ ಪರ ಹಾಜರಾಗಿದ್ದರು.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ವಿರುದ್ಧ 2022ರ ಜೂನ್ 21ರಂದು ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ ಸೆಪ್ಟೆಂಬರ್ 2ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ ಜಾಮೀನು ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ; ತಕ್ಷಣವೇ ಶರಣಾಗುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...