Homeಮುಖಪುಟಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು ಎಂದ ನ್ಯಾಯಾಲಯ

- Advertisement -
- Advertisement -

“ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು” ಎಂದಿರುವ ಸುಪ್ರೀಂ ಕೋರ್ಟ್, ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸಾಮೂಹಿಕವಾಗಿ ಮತಾಂತರಗೊಳಿಸಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ದಾಖಲಿಸಲಾಗಿದ್ದ ಐದು ಎಫ್‌ಐಆರ್‌ಗಳನ್ನು ಶುಕ್ರವಾರ (ಅ.17) ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ಪ್ರಯಾಗ್‌ರಾಜ್‌ನ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಇತರರ ವಿರುದ್ಧ 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಮಾಡಿದೆ ಎಂದು ವರದಿಯಾಗಿದೆ.

ಬಲವಂತದ ಮತಾಂತರದಲ್ಲಿ ಭಾಗವಹಿಸಿದ ಅಥವಾ ಅದಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಉಪಕುಲಪತಿ ರಾಜೇಂದ್ರ ಬಿಹಾರಿ ಲಾಲ್ ಮತ್ತು ಇತರ ವಿರುದ್ದ ದಾಖಲಿಸಿದ್ದ ಎಫ್‌ಐಆರ್‌ಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳು ‘ಕಾನೂನು ದೌರ್ಬಲ್ಯಗಳು, ಕಾರ್ಯವಿಧಾನದ ಲೋಪಗಳು ಮತ್ತು ವಿಶ್ವಾಸಾರ್ಹ ಸಾಕ್ಷ್ಯಗಳ ಕೊರತೆ’ ಯನ್ನು ಹೊಂದಿವೆ ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದ್ದಾರೆ. ವಿಚಾರಣೆಯನ್ನು ಮುಂದುವರಿಸುವುದು ‘ನ್ಯಾಯದ ಅಣಕ’ ಎಂದು ತಿಳಿಸಿದ್ದಾರೆ.

“ಕ್ರಿಮಿನಲ್ ಕಾನೂನನ್ನು ಅಮಾಯಕ ವ್ಯಕ್ತಿಗಳಿಗೆ ಕಿರುಕುಳ ನೀಡುವ ಸಾಧವಾಗಿ ಬಳಸಲು ಅನುಮತಿಸುವುದಿಲ್ಲ. ಪ್ರಾಸಿಕ್ಯೂಷನ್ ಸಂಸ್ಥೆಗಳು ನಂಬಿಕೆಗೆ ಅರ್ಹವಲ್ಲದ ವಿಷಯಗಳ ಆಧಾರದ ಮೇಲೆ ತಮ್ಮ ಇಚ್ಛೆಯಂತೆ ಮತ್ತು ಕಲ್ಪನಾತೀತವಾಗಿ ಮೊಕದ್ದಮೆ ಹೂಡುತ್ತಿವೆ” ಎಂದು 2022ರಲ್ಲಿ ದಾಖಲಾದ ಎಫ್‌ಐಆರ್‌ಗಳಲ್ಲಿ ಒಂದರ ನೋಂದಣಿಯಲ್ಲಿನ ‘ಸ್ಪಷ್ಟವಾದ ಉಲ್ಲಂಘನೆಗಳನ್ನು’ ಉಲ್ಲೇಖಿಸುತ್ತಾ ಪೀಠ ಹೇಳಿರುವುದಾಗಿ ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಥವಾ ದತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕ್ರಿಮಿನಲ್ ಅಪರಾಧವಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪ್ರತಿಯೊಂದು ಎಫ್‌ಐಆರ್‌ನ ವಿವರಗಳನ್ನು ಪರಿಶೀಲಿಸಿದ ನ್ಯಾಯಾಲಯವು, ಮತಾಂತರಗೊಂಡಿದ್ದಾರೆ ಎನ್ನಲಾದ ಯಾವುದೇ ವ್ಯಕ್ತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿಲ್ಲ ಎಂದು ತಿಳಿಸಿದೆ.

ಪ್ರಕರಣದ ಒಂದು ಎಫ್‌ಐಆರ್ ಬಗ್ಗೆ ಮಾತನಾಡಿದ ನ್ಯಾಯಾಧೀಶರು, ದೂರುದಾರ ವಿಶ್ವ ಹಿಂದೂ ಪರಿಷತ್ ಸದಸ್ಯ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ‘ನೊಂದಣಿಗೊಂಡ ವ್ಯಕ್ತಿ’ ಅಲ್ಲ ಎಂದು ಹೇಳಿರುವುದಾಗಿ ಟೆಲಿಗ್ರಾಫ್ ವರದಿ ತಿಳಿಸಿದೆ.

ತಿದ್ದುಪಡಿ ಮಾಡದ ಕಾನೂನಿನ ಸೆಕ್ಷನ್ 4ರ ಅಡಿಯಲ್ಲಿ, ದೂರುದಾರ ಮತಾಂತರಗೊಂಡ ವ್ಯಕ್ತಿಯ ಸಂಬಂಧಿಯಾಗಿರಬೇಕು ಎಂದಿತ್ತು. ಯಾವುದೇ ವ್ಯಕ್ತಿಗೆ ಮತಾಂತರದ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಕಾನೂನನ್ನು 2024ರಲ್ಲಿ ತಿದ್ದುಪಡಿ ಮಾಡಲಾಯಿತು.

ಪ್ರಸ್ತುತ ಪ್ರಕರಣದ ಎಫ್‌ಐಆರ್ ಅನ್ನು ಕಾನೂನು ತಿದ್ದುಪಡಿ ಮಾಡುವ ಮೊದಲೇ ದಾಖಲಿಸಲಾಗಿದ್ದು, ಹಾಗಾಗಿ, ದೂರು ಅಮಾನ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆಯ ಬಗ್ಗೆ ವಿಳಂಬಿತ ದೂರುಗಳನ್ನು ಸಲ್ಲಿಸಲು ‘ಸ್ವಹಿತಾಸಕ್ತಿ ಹೊಂದಿರುವ ವ್ಯಕ್ತಿಗಳನ್ನು’ ಪ್ರೋತ್ಸಾಹಿಸುವ ಮೂಲಕ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯನ್ನು ಸರಿದೂಗಿಸಲು ಪ್ರಯತ್ನಿಸಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

“ಸಾಕ್ಷಿಗಳು ಕಾನೂನುಬಾಹಿರ ಧಾರ್ಮಿಕ ಮತಾಂತರಕ್ಕೆ ಒಳಗಾಗಿಲ್ಲ, ಅಥವಾ ಏಪ್ರಿಲ್ 14, 2022ರಂದು ನಡೆದ ಸಾಮೂಹಿಕ ಮತಾಂತರದ ಸ್ಥಳದಲ್ಲಿ ಅವರು ಇರಲಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ ಎಂಬುವುದನ್ನು ಗಮನಿಸಿದ ಪೀಠ, “ಇದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಆರೋಪಿಗಳನ್ನು ಅನಗತ್ಯ ಕಿರುಕುಳಕ್ಕೆ ಒಳಪಡಿಸುತ್ತದೆ” ಎಂದಿದೆ.

ಆದಾಗ್ಯೂ, ಆರು ಪ್ರಕರಣಗಳಲ್ಲಿ ಒಂದು ಪ್ರತ್ಯೇಕ ಅಪರಾಧಗಳನ್ನು ಒಳಗೊಂಡಿರುವುದರಿಂದ ನ್ಯಾಯಾಲಯವು ಅರ್ಜಿಗಳ ಗುಂಪಿನಿಂದ ಬೇರ್ಪಡಿಸಿದೆ. ಆ ಪ್ರಕರಣದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಆರೋಪಿಗಳಿಗೆ ನೀಡಲಾದ ಬಂಧನದಿಂದ ಮಧ್ಯಂತರ ರಕ್ಷಣೆಯ ಬಗ್ಗೆ ನ್ಯಾಯಾಲಯ ನಿರ್ಧರಿಸುವವರೆಗೆ ಅದು ಮುಂದುವರಿಯಲಿದೆ ಎಂದು ಹೇಳಿದೆ.

ಡಿಸೆಂಬರ್ 2021ಮತ್ತು ಜನವರಿ 2023 ರ ನಡುವೆ, ಫತೇಪುರ್ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ರಾಜ್ಯದ ಮತಾಂತರ ವಿರೋಧಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.

ವಿಶ್ವ ಹಿಂದೂ ಪರಿಷತ್ತಿನ ಫತೇಪುರ್ ಘಟಕದ ಉಪಾಧ್ಯಕ್ಷ ಹಿಮಾಂಶು ದೀಕ್ಷಿತ್ ಅವರ ದೂರಿನ ಆಧಾರದ ಮೇಲೆ ಏಪ್ರಿಲ್ 15, 2022 ರಂದು ದಾಖಲಿಸಲಾದ ಎಫ್‌ಐಆರ್‌ ಇವುಗಳಲ್ಲಿ ಒಂದು.

ಕ್ರಿಶ್ಚಿಯನ್ ಧರ್ಮದ ಆಚರಣೆಯ ದಿನವಾದ ಮಾಂಡಿ ಗುರುವಾರದಂದು ಇವಾಂಜೆಲಿಕಲ್ ಚರ್ಚ್ ಆಫ್ ಇಂಡಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90 ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಈ ಪ್ರಕರಣ ಆರೋಪವಾಗಿತ್ತು.

ಹಣ ಮತ್ತು ಇತರ ಆಮಿಷಗಳನ್ನು ಒಡ್ಡಿ ಹಿಂದೂಗಳನ್ನು ಕಾರ್ಯಕ್ರಮಕ್ಕೆ ಕರೆಸಲಾಗಿತ್ತು. ಅಲ್ಲಿ ಮತಾಂತರ ಮಾಡಲಾಗಿತ್ತು ಎಂದು ದೂರುದಾರ ಆರೋಪಿಸಿದ್ದರು.

ದೂರು ಸ್ವೀಕರಿಸಿ ಪೊಲೀಸರು ಮತಾಂತರ ವಿರೋಧಿ ಕಾನೂನಿನ ಜೊತೆಗೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಮತ್ತು ಸುಲಿಗೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಡಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....