Homeಮುಖಪುಟಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ 5 ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು ಎಂದ ನ್ಯಾಯಾಲಯ

- Advertisement -
- Advertisement -

“ಕ್ರಿಮಿನಲ್ ಕಾನೂನುಗಳು ಮುಗ್ದ ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಬಾರದು” ಎಂದಿರುವ ಸುಪ್ರೀಂ ಕೋರ್ಟ್, ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಸಾಮೂಹಿಕವಾಗಿ ಮತಾಂತರಗೊಳಿಸಲಾಗಿದೆ ಎಂಬ ಆರೋಪದ ಮೇಲೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ದಾಖಲಿಸಲಾಗಿದ್ದ ಐದು ಎಫ್‌ಐಆರ್‌ಗಳನ್ನು ಶುಕ್ರವಾರ (ಅ.17) ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ಪ್ರಯಾಗ್‌ರಾಜ್‌ನ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಇತರರ ವಿರುದ್ಧ 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಮಾಡಿದೆ ಎಂದು ವರದಿಯಾಗಿದೆ.

ಬಲವಂತದ ಮತಾಂತರದಲ್ಲಿ ಭಾಗವಹಿಸಿದ ಅಥವಾ ಅದಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಉಪಕುಲಪತಿ ರಾಜೇಂದ್ರ ಬಿಹಾರಿ ಲಾಲ್ ಮತ್ತು ಇತರ ವಿರುದ್ದ ದಾಖಲಿಸಿದ್ದ ಎಫ್‌ಐಆರ್‌ಗಳನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳು ‘ಕಾನೂನು ದೌರ್ಬಲ್ಯಗಳು, ಕಾರ್ಯವಿಧಾನದ ಲೋಪಗಳು ಮತ್ತು ವಿಶ್ವಾಸಾರ್ಹ ಸಾಕ್ಷ್ಯಗಳ ಕೊರತೆ’ ಯನ್ನು ಹೊಂದಿವೆ ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದ್ದಾರೆ. ವಿಚಾರಣೆಯನ್ನು ಮುಂದುವರಿಸುವುದು ‘ನ್ಯಾಯದ ಅಣಕ’ ಎಂದು ತಿಳಿಸಿದ್ದಾರೆ.

“ಕ್ರಿಮಿನಲ್ ಕಾನೂನನ್ನು ಅಮಾಯಕ ವ್ಯಕ್ತಿಗಳಿಗೆ ಕಿರುಕುಳ ನೀಡುವ ಸಾಧವಾಗಿ ಬಳಸಲು ಅನುಮತಿಸುವುದಿಲ್ಲ. ಪ್ರಾಸಿಕ್ಯೂಷನ್ ಸಂಸ್ಥೆಗಳು ನಂಬಿಕೆಗೆ ಅರ್ಹವಲ್ಲದ ವಿಷಯಗಳ ಆಧಾರದ ಮೇಲೆ ತಮ್ಮ ಇಚ್ಛೆಯಂತೆ ಮತ್ತು ಕಲ್ಪನಾತೀತವಾಗಿ ಮೊಕದ್ದಮೆ ಹೂಡುತ್ತಿವೆ” ಎಂದು 2022ರಲ್ಲಿ ದಾಖಲಾದ ಎಫ್‌ಐಆರ್‌ಗಳಲ್ಲಿ ಒಂದರ ನೋಂದಣಿಯಲ್ಲಿನ ‘ಸ್ಪಷ್ಟವಾದ ಉಲ್ಲಂಘನೆಗಳನ್ನು’ ಉಲ್ಲೇಖಿಸುತ್ತಾ ಪೀಠ ಹೇಳಿರುವುದಾಗಿ ವರದಿಯಾಗಿದೆ.

ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಥವಾ ದತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು 2021ರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಅಥವಾ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕ್ರಿಮಿನಲ್ ಅಪರಾಧವಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ದಿ ಟೆಲಿಗ್ರಾಫ್ ವರದಿ ಮಾಡಿದೆ.

ಪ್ರತಿಯೊಂದು ಎಫ್‌ಐಆರ್‌ನ ವಿವರಗಳನ್ನು ಪರಿಶೀಲಿಸಿದ ನ್ಯಾಯಾಲಯವು, ಮತಾಂತರಗೊಂಡಿದ್ದಾರೆ ಎನ್ನಲಾದ ಯಾವುದೇ ವ್ಯಕ್ತಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿಲ್ಲ ಎಂದು ತಿಳಿಸಿದೆ.

ಪ್ರಕರಣದ ಒಂದು ಎಫ್‌ಐಆರ್ ಬಗ್ಗೆ ಮಾತನಾಡಿದ ನ್ಯಾಯಾಧೀಶರು, ದೂರುದಾರ ವಿಶ್ವ ಹಿಂದೂ ಪರಿಷತ್ ಸದಸ್ಯ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 4ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ‘ನೊಂದಣಿಗೊಂಡ ವ್ಯಕ್ತಿ’ ಅಲ್ಲ ಎಂದು ಹೇಳಿರುವುದಾಗಿ ಟೆಲಿಗ್ರಾಫ್ ವರದಿ ತಿಳಿಸಿದೆ.

ತಿದ್ದುಪಡಿ ಮಾಡದ ಕಾನೂನಿನ ಸೆಕ್ಷನ್ 4ರ ಅಡಿಯಲ್ಲಿ, ದೂರುದಾರ ಮತಾಂತರಗೊಂಡ ವ್ಯಕ್ತಿಯ ಸಂಬಂಧಿಯಾಗಿರಬೇಕು ಎಂದಿತ್ತು. ಯಾವುದೇ ವ್ಯಕ್ತಿಗೆ ಮತಾಂತರದ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಕಾನೂನನ್ನು 2024ರಲ್ಲಿ ತಿದ್ದುಪಡಿ ಮಾಡಲಾಯಿತು.

ಪ್ರಸ್ತುತ ಪ್ರಕರಣದ ಎಫ್‌ಐಆರ್ ಅನ್ನು ಕಾನೂನು ತಿದ್ದುಪಡಿ ಮಾಡುವ ಮೊದಲೇ ದಾಖಲಿಸಲಾಗಿದ್ದು, ಹಾಗಾಗಿ, ದೂರು ಅಮಾನ್ಯವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆಪಾದಿತ ಘಟನೆಯ ಬಗ್ಗೆ ವಿಳಂಬಿತ ದೂರುಗಳನ್ನು ಸಲ್ಲಿಸಲು ‘ಸ್ವಹಿತಾಸಕ್ತಿ ಹೊಂದಿರುವ ವ್ಯಕ್ತಿಗಳನ್ನು’ ಪ್ರೋತ್ಸಾಹಿಸುವ ಮೂಲಕ ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯನ್ನು ಸರಿದೂಗಿಸಲು ಪ್ರಯತ್ನಿಸಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

“ಸಾಕ್ಷಿಗಳು ಕಾನೂನುಬಾಹಿರ ಧಾರ್ಮಿಕ ಮತಾಂತರಕ್ಕೆ ಒಳಗಾಗಿಲ್ಲ, ಅಥವಾ ಏಪ್ರಿಲ್ 14, 2022ರಂದು ನಡೆದ ಸಾಮೂಹಿಕ ಮತಾಂತರದ ಸ್ಥಳದಲ್ಲಿ ಅವರು ಇರಲಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ ಎಂಬುವುದನ್ನು ಗಮನಿಸಿದ ಪೀಠ, “ಇದು ತನಿಖಾ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಆರೋಪಿಗಳನ್ನು ಅನಗತ್ಯ ಕಿರುಕುಳಕ್ಕೆ ಒಳಪಡಿಸುತ್ತದೆ” ಎಂದಿದೆ.

ಆದಾಗ್ಯೂ, ಆರು ಪ್ರಕರಣಗಳಲ್ಲಿ ಒಂದು ಪ್ರತ್ಯೇಕ ಅಪರಾಧಗಳನ್ನು ಒಳಗೊಂಡಿರುವುದರಿಂದ ನ್ಯಾಯಾಲಯವು ಅರ್ಜಿಗಳ ಗುಂಪಿನಿಂದ ಬೇರ್ಪಡಿಸಿದೆ. ಆ ಪ್ರಕರಣದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಆರೋಪಿಗಳಿಗೆ ನೀಡಲಾದ ಬಂಧನದಿಂದ ಮಧ್ಯಂತರ ರಕ್ಷಣೆಯ ಬಗ್ಗೆ ನ್ಯಾಯಾಲಯ ನಿರ್ಧರಿಸುವವರೆಗೆ ಅದು ಮುಂದುವರಿಯಲಿದೆ ಎಂದು ಹೇಳಿದೆ.

ಡಿಸೆಂಬರ್ 2021ಮತ್ತು ಜನವರಿ 2023 ರ ನಡುವೆ, ಫತೇಪುರ್ ಜಿಲ್ಲೆ ಮತ್ತು ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ರಾಜ್ಯದ ಮತಾಂತರ ವಿರೋಧಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಆರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.

ವಿಶ್ವ ಹಿಂದೂ ಪರಿಷತ್ತಿನ ಫತೇಪುರ್ ಘಟಕದ ಉಪಾಧ್ಯಕ್ಷ ಹಿಮಾಂಶು ದೀಕ್ಷಿತ್ ಅವರ ದೂರಿನ ಆಧಾರದ ಮೇಲೆ ಏಪ್ರಿಲ್ 15, 2022 ರಂದು ದಾಖಲಿಸಲಾದ ಎಫ್‌ಐಆರ್‌ ಇವುಗಳಲ್ಲಿ ಒಂದು.

ಕ್ರಿಶ್ಚಿಯನ್ ಧರ್ಮದ ಆಚರಣೆಯ ದಿನವಾದ ಮಾಂಡಿ ಗುರುವಾರದಂದು ಇವಾಂಜೆಲಿಕಲ್ ಚರ್ಚ್ ಆಫ್ ಇಂಡಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 90 ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಈ ಪ್ರಕರಣ ಆರೋಪವಾಗಿತ್ತು.

ಹಣ ಮತ್ತು ಇತರ ಆಮಿಷಗಳನ್ನು ಒಡ್ಡಿ ಹಿಂದೂಗಳನ್ನು ಕಾರ್ಯಕ್ರಮಕ್ಕೆ ಕರೆಸಲಾಗಿತ್ತು. ಅಲ್ಲಿ ಮತಾಂತರ ಮಾಡಲಾಗಿತ್ತು ಎಂದು ದೂರುದಾರ ಆರೋಪಿಸಿದ್ದರು.

ದೂರು ಸ್ವೀಕರಿಸಿ ಪೊಲೀಸರು ಮತಾಂತರ ವಿರೋಧಿ ಕಾನೂನಿನ ಜೊತೆಗೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ ಮತ್ತು ಸುಲಿಗೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಡಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...