Homeಮುಖಪುಟಕಾಲೇಜು ಲೈಬ್ರೆರಿಯಲ್ಲಿ 'ಹಿಂದೂಫೋಬಿಕ್' ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: 'ಅಸಂಬದ್ಧ' ಎಂದು...

ಕಾಲೇಜು ಲೈಬ್ರೆರಿಯಲ್ಲಿ ‘ಹಿಂದೂಫೋಬಿಕ್’ ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: ‘ಅಸಂಬದ್ಧ’ ಎಂದು ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಕಾಲೇಜು ಗ್ರಂಥಾಲಯದಲ್ಲಿ ‘ಹಿಂದೂಫೋಬಿಕ್’ ಪುಸ್ತಕಗಳು ಇದ್ದ ಕಾರಣ ಪ್ರಾಂಶುಪಾಲರ ವಿರುದ್ಧ  ದಾಖಲಾಗಿದ್ದ ಎಫ್‌ಐಆರ್‌ನ್ನು ‘ಅಸಂಬದ್ಧ’ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಇಂದೋರ್‌ನ ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಇನಾಮುರ್ ರೆಹಮಾನ್ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ನ್ನು ಭಾರತದ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಕಾಲೇಜು ಗ್ರಂಥಾಲಯದಲ್ಲಿ ಕೆಲವು ಪುಸ್ತಕಗಳು ಪತ್ತೆಯಾದ ಕಾರಣ ಪ್ರಾಂಶುಪಾಲರ ವಿರುದ್ಧ ಹಿಂದೂಫೋಬಿಯಾ ಮತ್ತು ಭಾರತ ವಿರೋಧಿ ಪ್ರಚಾರದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಎಫ್‌ಐಆರ್‌ನಲ್ಲಿನ ಆರೋಪಗಳು ಅಸಂಬದ್ಧವಾಗಿದೆ, ಏಕೆಂದರೆ ಈ ಪುಸ್ತಕಗಳು ಸುಪ್ರೀಂಕೋರ್ಟ್ ಲೈಬ್ರರಿಯಲ್ಲಿಯೂ ಇರಬಹುದು ಎಂದು ಹೇಳಿದ್ದಾರೆ.

ಪ್ರೊಫೆಸರ್ ಇನಾಮುರ್ ರೆಹಮಾನ್ ಅವರನ್ನು ಹಿಂಸಿಸಲು ರಾಜ್ಯ ಏಕೆ ಉತ್ಸುಕವಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿದ್ದು, ಇದು ಪಠ್ಯಕ್ರಮಕ್ಕೆ ಸಂಬಂಧಿಸಿದೆ. ಅವರು ಈಗಾಗಲೇ ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಪುಸ್ತಕವು ಸುಪ್ರೀಂಕೋರ್ಟ್ ಲೈಬ್ರರಿಯಲ್ಲಿಯೂ ಇರಬಹುದು ಎಂದು ಹೇಳಿದೆ.

ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಪ್ರೊಫೆಸರ್ ರೆಹಮಾನ್ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ ಈ ಕುರಿತ ಮುಂದಿನ ವಿಚಾರಣೆಯನ್ನು 10 ವಾರಗಳವರೆಗೆ ಮುಂದೂಡಿದೆ.

ಇಂದೋರ್‌ನಲ್ಲಿನ ‘ಶಾಸಕಿಯ ನವೀನ್ ವಿಧಿ ಮಹಾವಿದ್ಯಾಲಯ’ದ ಗ್ರಂಥಾಲಯದಲ್ಲಿ “ಹಿಂದೂಫೋಬಿಕ್” ಪುಸ್ತಕಗಳಿದೆ ಎಂದು ಎಬಿವಿಪಿ ಪ್ರತಿಭಟನೆಯನ್ನು ನಡೆಸಿತ್ತು. ‘ಸಾಮೂಹಿಕ ಹಿಂಸೆ ಮತ್ತು ಅಪರಾಧ ನ್ಯಾಯ ವ್ಯವಸ್ಥೆ’ ಮತ್ತು ‘ಮಹಿಳೆ ಮತ್ತು ಕ್ರಿಮಿನಲ್ ಕಾನೂನು’ ಎಂಬ ಶೀರ್ಷಿಕೆಯ ಎರಡು ಪುಸ್ತಕಗಳ ಬಗ್ಗೆ ವಿವಾದವನ್ನು ಸೃಷ್ಟಿಸಲಾಗಿತ್ತು. ಈ ಪುಸ್ತಕಗಳನ್ನು ಡಾ ಫರ್ಹತ್ ಖಾನ್ ಬರೆದಿದ್ದರು.

ಹಿಂದೂ ಸಮಾಜದಲ್ಲಿ ಸ್ತ್ರೀಯರನ್ನು ನಡೆಸಿಕೊಳ್ಳುವ ರೀತಿ, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಹಿಂದೂ ಮಹಿಳೆಯರು ಕಾಮವನ್ನು ಪೂರೈಸುವ ಸಾಧನಗಳಾಗಿದ್ದರು ಮತ್ತು ಅವರು ಪುರುಷರಿಗೆ ಹೇಗೆ ಅಧೀನರಾಗಿದ್ದರು ಎಂಬುವುದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಎಬಿವಿಪಿಯಲ್ಲಿ ಸಕ್ರಿಯನಾಗಿದ್ದ ಕಾಲೇಜಿನ ಎಲ್‌ಎಲ್‌ಎಂ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಸನ್‌ಗಳಡಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆಹಮಾನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಅಧ್ಯಾಪಕರ ಅಮಾನತು, ಪ್ರೊ ರೆಹಮಾನ್ ರಾಜೀನಾಮೆ ಮತ್ತು ಪೊಲೀಸ್ ಪ್ರಕರಣದಂತಹ ಬೆಳವಣಿಗೆಗಳು ನಡೆದಿದ್ದವು. ಡಿಸೆಂಬರ್ 2022ರಲ್ಲಿ ಪ್ರೊಫೆಸರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಪ್ರಾಧ್ಯಾಪಕರ ಪರ ವಕೀಲ ಅಲ್ಜೋ ಕೆ ಜೋಸೆಫ್ ವಾದ ಮಂಡಿಸಿದ್ದರು. ಮಂಗಳವಾರ ನಡೆದ ಪ್ರಕರಣದ ವಿಚಾರಣೆ ವೇಳೆ ವಕೀಲರು, ಇನಾಮುರ್ ರೆಹಮಾನ್ ಶೀಘ್ರವೇ ನಿವೃತ್ತರಾಗಲಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಸೆಕ್ಷನ್ 482 CrPC ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನು ಓದಿ: ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...