Homeಮುಖಪುಟಕಾಲೇಜು ಲೈಬ್ರೆರಿಯಲ್ಲಿ 'ಹಿಂದೂಫೋಬಿಕ್' ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: 'ಅಸಂಬದ್ಧ' ಎಂದು...

ಕಾಲೇಜು ಲೈಬ್ರೆರಿಯಲ್ಲಿ ‘ಹಿಂದೂಫೋಬಿಕ್’ ಪುಸ್ತಕ ಇದೆ ಎಂದು ಪ್ರಾಂಶುಪಾಲರ ವಿರುದ್ಧ ಕೇಸ್: ‘ಅಸಂಬದ್ಧ’ ಎಂದು ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ಕಾಲೇಜು ಗ್ರಂಥಾಲಯದಲ್ಲಿ ‘ಹಿಂದೂಫೋಬಿಕ್’ ಪುಸ್ತಕಗಳು ಇದ್ದ ಕಾರಣ ಪ್ರಾಂಶುಪಾಲರ ವಿರುದ್ಧ  ದಾಖಲಾಗಿದ್ದ ಎಫ್‌ಐಆರ್‌ನ್ನು ‘ಅಸಂಬದ್ಧ’ ಎಂದು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ.

ಇಂದೋರ್‌ನ ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲ ಇನಾಮುರ್ ರೆಹಮಾನ್ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ನ್ನು ಭಾರತದ ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಕಾಲೇಜು ಗ್ರಂಥಾಲಯದಲ್ಲಿ ಕೆಲವು ಪುಸ್ತಕಗಳು ಪತ್ತೆಯಾದ ಕಾರಣ ಪ್ರಾಂಶುಪಾಲರ ವಿರುದ್ಧ ಹಿಂದೂಫೋಬಿಯಾ ಮತ್ತು ಭಾರತ ವಿರೋಧಿ ಪ್ರಚಾರದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಎಫ್‌ಐಆರ್‌ನಲ್ಲಿನ ಆರೋಪಗಳು ಅಸಂಬದ್ಧವಾಗಿದೆ, ಏಕೆಂದರೆ ಈ ಪುಸ್ತಕಗಳು ಸುಪ್ರೀಂಕೋರ್ಟ್ ಲೈಬ್ರರಿಯಲ್ಲಿಯೂ ಇರಬಹುದು ಎಂದು ಹೇಳಿದ್ದಾರೆ.

ಪ್ರೊಫೆಸರ್ ಇನಾಮುರ್ ರೆಹಮಾನ್ ಅವರನ್ನು ಹಿಂಸಿಸಲು ರಾಜ್ಯ ಏಕೆ ಉತ್ಸುಕವಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿದ್ದು, ಇದು ಪಠ್ಯಕ್ರಮಕ್ಕೆ ಸಂಬಂಧಿಸಿದೆ. ಅವರು ಈಗಾಗಲೇ ನಿರೀಕ್ಷಣಾ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಪುಸ್ತಕವು ಸುಪ್ರೀಂಕೋರ್ಟ್ ಲೈಬ್ರರಿಯಲ್ಲಿಯೂ ಇರಬಹುದು ಎಂದು ಹೇಳಿದೆ.

ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನಿರಾಕರಿಸಿದ ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ  ಪ್ರೊಫೆಸರ್ ರೆಹಮಾನ್ ಸಲ್ಲಿಸಿದ ಮೇಲ್ಮನವಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ ಈ ಕುರಿತ ಮುಂದಿನ ವಿಚಾರಣೆಯನ್ನು 10 ವಾರಗಳವರೆಗೆ ಮುಂದೂಡಿದೆ.

ಇಂದೋರ್‌ನಲ್ಲಿನ ‘ಶಾಸಕಿಯ ನವೀನ್ ವಿಧಿ ಮಹಾವಿದ್ಯಾಲಯ’ದ ಗ್ರಂಥಾಲಯದಲ್ಲಿ “ಹಿಂದೂಫೋಬಿಕ್” ಪುಸ್ತಕಗಳಿದೆ ಎಂದು ಎಬಿವಿಪಿ ಪ್ರತಿಭಟನೆಯನ್ನು ನಡೆಸಿತ್ತು. ‘ಸಾಮೂಹಿಕ ಹಿಂಸೆ ಮತ್ತು ಅಪರಾಧ ನ್ಯಾಯ ವ್ಯವಸ್ಥೆ’ ಮತ್ತು ‘ಮಹಿಳೆ ಮತ್ತು ಕ್ರಿಮಿನಲ್ ಕಾನೂನು’ ಎಂಬ ಶೀರ್ಷಿಕೆಯ ಎರಡು ಪುಸ್ತಕಗಳ ಬಗ್ಗೆ ವಿವಾದವನ್ನು ಸೃಷ್ಟಿಸಲಾಗಿತ್ತು. ಈ ಪುಸ್ತಕಗಳನ್ನು ಡಾ ಫರ್ಹತ್ ಖಾನ್ ಬರೆದಿದ್ದರು.

ಹಿಂದೂ ಸಮಾಜದಲ್ಲಿ ಸ್ತ್ರೀಯರನ್ನು ನಡೆಸಿಕೊಳ್ಳುವ ರೀತಿ, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಹಿಂದೂ ಮಹಿಳೆಯರು ಕಾಮವನ್ನು ಪೂರೈಸುವ ಸಾಧನಗಳಾಗಿದ್ದರು ಮತ್ತು ಅವರು ಪುರುಷರಿಗೆ ಹೇಗೆ ಅಧೀನರಾಗಿದ್ದರು ಎಂಬುವುದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಎಬಿವಿಪಿಯಲ್ಲಿ ಸಕ್ರಿಯನಾಗಿದ್ದ ಕಾಲೇಜಿನ ಎಲ್‌ಎಲ್‌ಎಂ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಸನ್‌ಗಳಡಿಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆಹಮಾನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಅಧ್ಯಾಪಕರ ಅಮಾನತು, ಪ್ರೊ ರೆಹಮಾನ್ ರಾಜೀನಾಮೆ ಮತ್ತು ಪೊಲೀಸ್ ಪ್ರಕರಣದಂತಹ ಬೆಳವಣಿಗೆಗಳು ನಡೆದಿದ್ದವು. ಡಿಸೆಂಬರ್ 2022ರಲ್ಲಿ ಪ್ರೊಫೆಸರ್ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿತ್ತು.

ಪ್ರಾಧ್ಯಾಪಕರ ಪರ ವಕೀಲ ಅಲ್ಜೋ ಕೆ ಜೋಸೆಫ್ ವಾದ ಮಂಡಿಸಿದ್ದರು. ಮಂಗಳವಾರ ನಡೆದ ಪ್ರಕರಣದ ವಿಚಾರಣೆ ವೇಳೆ ವಕೀಲರು, ಇನಾಮುರ್ ರೆಹಮಾನ್ ಶೀಘ್ರವೇ ನಿವೃತ್ತರಾಗಲಿದ್ದಾರೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ. ಸೆಕ್ಷನ್ 482 CrPC ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸಲು ಹೈಕೋರ್ಟ್ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನು ಓದಿ: ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...