Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...