Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...