Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...