Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...