Homeರಾಷ್ಟ್ರೀಯಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ...

ಜ್ಞಾನವಾಪಿ ಮಸೀದಿ: ಶಿವಲಿಂಗ ಎಲ್ಲಿ ಕಂಡು ಬಂದಿದೆ ಎಂಬ ಸುಪ್ರೀಂ ಪ್ರಶ್ನೆಗೆ, ವರದಿ ನೋಡಿಲ್ಲ ಎಂದ ಯುಪಿ ಸರ್ಕಾರ!

- Advertisement -
- Advertisement -

ಉತ್ತರ ಪ್ರದೇಶ ವಾರಣಾಸಿಯ ಜ್ಞಾನವಾಪಿ ಮಸೀದಿಯ ವಿಡಿಯೊ ಚಿತ್ರೀಕರಣ ಸಮಯದಲ್ಲಿ ವುಝೂ ಖಾನಾದಲ್ಲಿ ಕಂಡು ಬಂದ ‘ಕಾರಂಜಿ’ಯನ್ನು ಬಲಪಂಥೀಯ ವಕೀಲರು ‘ಶಿವಲಿಂಗ’ ಎಂದು ಪ್ರತಿಪಾದಿಸಿದ್ದರು. ಈ ಹಿನ್ನಲೆಯಲ್ಲಿ ನಗರದ ನ್ಯಾಯಾಲಯವು ವುಝೂ ಖಾನಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿತ್ತು. ಇದೀಗ ಸುಪ್ರೀಂಕೋರ್ಟ್‌‌, “ಶಿವಲಿಂಗ ನಿಖರವಾಗಿ ಎಲ್ಲಿ ಕಂಡುಬಂದಿದೆ” ಎಂದು ವಾರಣಾಸಿ ಆಡಳಿತವನ್ನು ಕೇಳಿದೆ.

ಮಸೀದಿ ಸಂಕೀರ್ಣದ ಚಿತ್ರೀಕರಣವನ್ನು ನಿಲ್ಲಿಸುವಂತೆ ವಾರಣಾಸಿಯ ಅಧಿಕಾರಿಗಳಿಗೆ ನಿರ್ದೇಶನವನ್ನು ಕೋರಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭ ಸುಪ್ರೀಂಕೋರ್ಟ್‌ ಆಡಳಿತಕ್ಕೆ ಶಿವಲಿಂಗದ ಬಗ್ಗೆ ಪ್ರಶ್ನಿಸಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ?” ಕೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೆ ಉತ್ತರಿಸಿದ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ನಾವು ವರದಿಯನ್ನು ನೋಡಿಲ್ಲ” ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಾಳೆಯವರೆಗೆ ಸಮಯ ಕೋರಿದ್ದಾರೆ.

ಇದನ್ನೂ ಓದಿ: ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

‘ಶಿವಲಿಂಗ’ ಪತ್ತೆಯಾಗಿದೆ ಎನ್ನಲಾಗಿರುವ ಸ್ಥಳವನ್ನು ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಸೀಲ್ ಮಾಡಲಾಗಿದೆ ಎಂದು ತುಷಾರ್‌‌ ಮೆಹ್ತಾ ಹೇಳಿದ್ದಾರೆ.

ದೇವಸ್ಥಾನದ ಪರ ದೂರುದಾರರು ಮಸೀದಿ ಚಿತ್ರೀಕರಣದ ವೇಳೆ ಮಸೀದಿಯ ಕೊಳದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. ಈ ಕೊಳವನ್ನು ನಮಾಜ್‌ ಮಾಡುವುದಕ್ಕಿಂತ ಮೊದಲು ಕೈಕಾಲು ಶುದ್ದೀಕರಣಕ್ಕೆ ಬಳಸಲಾಗುತ್ತದೆ. ಇದಕ್ಕೆ ವುಝೂ ಖಾನ ಎಂದು ಕರೆಯಲಾಗುತ್ತದೆ.

ಕೊಳದಲ್ಲಿ ‘ಶಿವಲಿಂಗ’ ಕಂಡುಬಂದರೆ, ಆ ಪ್ರದೇಶವನ್ನು ರಕ್ಷಿಸಬೇಕು, ಆದರೆ ಮುಸ್ಲಿಮರು ನಮಾಜ್‌ಗೆ ಮಸೀದಿಗೆ ಬರಲು ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಿದೆ.

ಈ ಮಧ್ಯೆ, ಸಮೀಕ್ಷೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಕ್ಕಾಗಿ ಸ್ಥಳೀಯ ವಾರಣಾಸಿ ನ್ಯಾಯಾಲಯವು ವಕೀಲ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಿದೆ.

ಇದನ್ನೂ ಓದಿ: ಕೋಮು ಕುದುರೆಯೇರಿ ಚುನಾವಣೆ ಗೆಲ್ಲುವ ಬಿಜೆಪಿ ತಂತ್ರ: ಚುನಾವಣೆ ಇರುವ ರಾಜ್ಯಗಳೆ ಟಾರ್ಗೆಟ್

ನಿನ್ನೆ, ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ “ಶಿವಲಿಂಗ” ಕಂಡುಬಂದಿದೆ ಎಂದು ಬಲಪಂಥೀಯ ಅರ್ಜಿದಾರರ ಹೇಳಿಕೆ ನೀಡಿದ ನಂತರ, ಸ್ಥಳೀಯ ನ್ಯಾಯಾಲಯವು ಅದನ್ನು ಸೀಲ್ ಮಾಡಲು ಆದೇಶಿಸಿತ್ತು. ಮಸೀದಿ ಸಮಿತಿ ಇದನ್ನು ತಿರಸ್ಕರಿಸಿದ್ದು, ಅದು “ಕಾರಂಜಿ”ಯಾಗಿದ್ದು ಶಿವಲಿಂಗವಲ್ಲ ಎಂದು ಪ್ರತಿಪಾದಿಸಿದೆ.

“ಮಸೀದಿಯ ವಿಡಿಯೊ ಸಮೀಕ್ಷೆಯ ವರದಿ ಇನ್ನೂ ಸಲ್ಲಿಸದಿರುವಾಗ ಸಿಟಿ ಕೋರ್ಟ್ ಸ್ಥಳವನ್ನು ಸೀಲ್ ಮಾಡಲು ಆದೇಶ ನೀಡಲು ಹೇಗೆ ಸಾಧ್ಯ?” ಎಂದು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಪ್ರಶ್ನಿಸಿದೆ.

“ಇತರರ ಅರ್ಜಿಯನ್ನು ಆಧರಿಸಿ ನ್ಯಾಯಾಲಯವು ಹೇಗೆ ಮುಂದುವರೆಯಿತು? ಸ್ಥಳವನ್ನು ಸೀಲ್ ಮಾಡಲು ಹೇಗೆ ಸಾಧ್ಯ? ಈ ಆದೇಶಗಳು ಹೇಗೆ ಜಾರಿಯಾಗುತ್ತವೆ ಎಂಬುದನ್ನು ನೋಡಿ” ಎಂದು ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೇಳಿದೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿ ಜ್ಞಾನವಾಪಿ ಮಸೀದಿ ಇದೆ. ಐವರು ಮಹಿಳಾ ಅರ್ಜಿದಾರರು ಮಸೀದಿ ಹೊರ ಗೋಡೆಗಳ ಮೇಲಿನ ವಿಗ್ರಹಗಳ ಮುಂದೆ ಮತ್ತು ಇತರ ‘ಹಳೆಯ ದೇವಾಲಯದ ಸಂಕೀರ್ಣದೊಳಗೆ ಗೋಚರಿಸುವ ಮತ್ತು ಅಗೋಚರ ದೇವತೆಗಳ’ ದೈನಂದಿನ ಪ್ರಾರ್ಥನೆಗೆ ಅವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಪ್ರದೇಶವನ್ನು ಪ್ರಸ್ತುತವಾಗಿ ವರ್ಷಕ್ಕೊಮ್ಮೆ ಪ್ರಾರ್ಥನೆಗಾಗಿ ತೆರೆಯಲಾಗುತ್ತದೆ.

ವಾರಣಾಸಿ ಸಿವಿಲ್ ನ್ಯಾಯಾಲಯವು ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು ಮತ್ತು ಕೊಳ ಸೇರಿದಂತೆ ಮಸೀದಿ ಸಂಕೀರ್ಣದ ವೀಡಿಯೊ ಮೌಲ್ಯಮಾಪನಕ್ಕೆ ಆದೇಶಿಸಿತು. ಅದಕ್ಕಾಗಿ ನ್ಯಾಯಾಲಯದ ಆಯುಕ್ತರನ್ನು ನೇಮಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...