Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...