Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...