Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...