Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಅದಾನಿ ಸಮೂಹದ ಕಂಪನಿಗಳ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಪ್ರಸ್ತುತ ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿದೆ.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಆಧಾರರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಜನವರಿ 24,2023 ರಂದು, ಯುಎಸ್ ಮೂಲದ ಕಿರು-ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ತನ್ನ ಸ್ಟಾಕ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು ಆರೋಪಿಸಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ: ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...