Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಅದಾನಿ ಸಮೂಹದ ಕಂಪನಿಗಳ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಪ್ರಸ್ತುತ ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿದೆ.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಆಧಾರರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಜನವರಿ 24,2023 ರಂದು, ಯುಎಸ್ ಮೂಲದ ಕಿರು-ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ತನ್ನ ಸ್ಟಾಕ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು ಆರೋಪಿಸಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ: ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...