Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಅದಾನಿ ಸಮೂಹದ ಕಂಪನಿಗಳ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಪ್ರಸ್ತುತ ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿದೆ.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಆಧಾರರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಜನವರಿ 24,2023 ರಂದು, ಯುಎಸ್ ಮೂಲದ ಕಿರು-ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ತನ್ನ ಸ್ಟಾಕ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು ಆರೋಪಿಸಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ: ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...