Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಅದಾನಿ ಸಮೂಹದ ಕಂಪನಿಗಳ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಪ್ರಸ್ತುತ ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿದೆ.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಆಧಾರರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಜನವರಿ 24,2023 ರಂದು, ಯುಎಸ್ ಮೂಲದ ಕಿರು-ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ತನ್ನ ಸ್ಟಾಕ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು ಆರೋಪಿಸಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ: ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...