Homeಮುಖಪುಟಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ಸೆಬಿ ತನಿಖೆಯಲ್ಲಿ ಹಸ್ತಕ್ಷೇಪಕ್ಕೆ ಸುಪ್ರೀಂಕೋರ್ಟ್ ನಕಾರ

- Advertisement -
- Advertisement -

ಅದಾನಿ ಸಮೂಹದ ಕಂಪನಿಗಳ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಕುರಿತು ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಹೊರಿಸಲಾದ ಆರೋಪಗಳ ಕುರಿತು ಎಸ್‌ಐಟಿ ತನಿಖೆಗೆ ಆದೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಪ್ರಸ್ತುತ ನಡೆಸುತ್ತಿರುವ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೆ ಸೂಕ್ತ ಕಾರಣಗಳಿಲ್ಲ ಎಂದು ಕೋರ್ಟ್ ಹೇಳಿದೆ.

ಅದಾನಿ ಸಮೂಹದ ವಿರುದ್ಧದ 24 ಪ್ರಕರಣಗಳ ಪೈಕಿ 22 ಪ್ರಕರಣಗಳ ತನಿಖೆಯನ್ನು ಸೆಬಿ ಪೂರ್ಣಗೊಳಿಸಿದೆ ಎಂದು ಕೋರ್ಟ್ ಗಮನಿಸಿದೆ. ಸಾಲಿಸಿಟರ್ ಜನರಲ್ ಅವರ ಭರವಸೆಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಾಲಯವು, ಉಳಿದ 2 ಪ್ರಕರಣಗಳ ತನಿಖೆಯನ್ನು ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೆಬಿಗೆ ಸೂಚಿಸಿದೆ.

ಸೆಬಿ ತನಿಖೆಯನ್ನು ಅನುಮಾನಿಸಿ ಅರ್ಜಿದಾರರು ಪತ್ರಿಕೆಯ ವರದಿಗಳು ಮತ್ತು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಮಾಡುವ ಯೋಜನೆಯ (OCCRP)ವರದಿ ತೋರಿಸಿರುವುದನ್ನು ಮಾನ್ಯ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಆಧಾರರಹಿತ ಸುದ್ದಿ ವರದಿಗಳು ಮತ್ತು ಮೂರನೇ ಪಕ್ಷದ ಸಂಸ್ಥೆಗಳ ವರದಿಗಳ ಆಧಾರದ ಮೇಲೆ ಶಾಸನಬದ್ಧ ಸಂಸ್ಥೆಯ ತನಿಖೆಯನ್ನು ಅನುಮಾನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಏನಿದು ಪ್ರಕರಣ?

ಜನವರಿ 24,2023 ರಂದು, ಯುಎಸ್ ಮೂಲದ ಕಿರು-ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ತನ್ನ ಸ್ಟಾಕ್ ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಅವುಗಳನ್ನು ತಿರುಚುತ್ತಿದೆ ಎಂದು ಆರೋಪಿಸಿ ವರದಿ ಪ್ರಕಟಿಸಿತ್ತು. ಇದಕ್ಕೆ ಪ್ರತಿಯಾಗಿ, ಅದಾನಿ ಸಮೂಹವು 413 ಪುಟಗಳ ಸಮಗ್ರ ಉತ್ತರವನ್ನು ಪ್ರಕಟಿಸುವ ಮೂಲಕ ಆರೋಪಗಳನ್ನು ಕಟುವಾಗಿ ನಿರಾಕರಿಸಿತ್ತು.

ಈ ಬೆನ್ನಲ್ಲೇ ವಕೀಲರಾದ ವಿಶಾಲ್ ತಿವಾರಿ, ಎಂಎಲ್ ಶರ್ಮಾ, ಕಾಂಗ್ರೆಸ್ ನಾಯಕ ಡಾ. ಜಯಾ ಠಾಕೂರ್ ಮತ್ತು ಸಾಮಾಜಿಕ ಕಾರ್ಯಕರ್ತೆ ಅನಾಮಿಕಾ ಜೈಸ್ವಾಲ್ ಅವರು ಅದಾನಿ ಸಮೂಹದ ವಂಚನೆಯ ಆರೋಪಗಳ ಕುರಿತು ತನಿಖೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.

ಮಾರ್ಚ್ 2ರಂದು ಈ ವಿಷಯದಲ್ಲಿ ಆದೇಶ ನೀಡಿದ ಸುಪ್ರೀಂ ಕೋರ್ಟ್, ಅದಾನಿ ಸಮೂಹದ ವಿಚಾರವಾಗಿ ಯಾವುದೇ ನಿಯಂತ್ರಕ ವೈಫಲ್ಯವನ್ನು ಹೊಂದಿದ್ದರೆ ತನಿಖೆ ನಡೆಸಲು ಸೆಬಿಯ ತಜ್ಞರ ಸಮಿತಿ ರಚಿಸಿತ್ತು. ತನಿಖಾ ಸಮಿತಿಯು ಒಪಿ ಭಟ್ (ಎಸ್‌ಬಿಐನ ಮಾಜಿ ಅಧ್ಯಕ್ಷ), ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ ಮತ್ತು ಸೋಮಶೇಖರನ್ ಸುಂದರೇಶನ್ ಅವರನ್ನು ಒಳಗೊಂಡಿದ್ದು, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಂ ಸಪ್ರೆ ಸಮಿತಿಯ ನೇತೃತ್ವ ವಹಿಸಿದ್ದಾರೆ.

ಮಾರ್ಚ್ 2ರ ಆದೇಶದಂತೆ ಸೆಬಿಗೆ ಸುಪ್ರೀಂ ಕೋರ್ಟ್ ತನಿಖೆ ಪೂರ್ಣಗೊಳಿಸಲು ನೀಡಿದ್ದ ಎರಡು ತಿಂಗಳ ಸಮಯವು ಮೇ 2 ರಂದು ಕೊನೆಗೊಂಡಿತ್ತು. ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸೆಬಿ, ತನಿಖೆಯನ್ನು ಪೂರ್ಣಗೊಳಿಸಲು ಆರು ತಿಂಗಳ ಅವಧಿಯನ್ನು ವಿಸ್ತರಿಸುವಂತೆ ಕೋರಿತ್ತು.

ಪ್ರಕರಣದ ವಹಿವಾಟುಗಳು ಸಂಕೀರ್ಣವಾಗಿವೆ ಮತ್ತು ಪರಿಶೀಲಿಸಲು ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಸೆಬಿ ತನ್ನ ಅಫಿಡವಿಟ್‌ನಲ್ಲಿ ಹೇಳಿತ್ತು. ಕನಿಷ್ಠ ಸಾರ್ವಜನಿಕ ಷೇರುದಾರರ (MPS) ನಿಯಮಗಳ ತನಿಖೆಗೆ ಸಂಬಂಧಿಸಿದಂತೆ ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸೆಕ್ಯುರಿಟೀಸ್ ಕಮಿಷನ್ಸ್ (IOSCO) ನೊಂದಿಗೆ ಬಹುಪಕ್ಷೀಯ ತಿಳುವಳಿಕೆ (MMOU) ಅಡಿಯಲ್ಲಿ ಈಗಾಗಲೇ ಹನ್ನೊಂದು ಸಾಗರೋತ್ತರ ನಿಯಂತ್ರಕರನ್ನು ಸಂಪರ್ಕಿಸಿದೆ ಎಂದು ಸೆಬಿ ಸುಪ್ರೀಂ ಕೋರ್ಟ್ ಪೀಠಕ್ಕೆ ತಿಳಿಸಿತ್ತು.

ಸೆಬಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಆರಂಭದಲ್ಲಿ ಸಂಪೂರ್ಣ ಆರು ತಿಂಗಳ ಅವಧಿ ವಿಸ್ತರಣೆ ಮಾಡಲು ನಿರಾಕರಿಸಿತ್ತು. ಆಗಸ್ಟ್ 14, 2023ರವರೆಗೆ ಗಡುವನ್ನು ವಿಸ್ತರಿಸಿ, ಮೇ 17 ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿತ್ತು. ಆದರೆ, ಆಗಸ್ಟ್ 14ರಂದು ಕೂಡ ತನಿಖಾ ವರದಿ ಸಲ್ಲಿಸಲು ಸೆಬಿ ವಿಫಲವಾಗಿತ್ತು.

ಈ ಹಿನ್ನೆಲೆ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ವಿಶಾಲ್ ತಿವಾರಿ ಸೆಬಿ ವಿರುದ್ದ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು. ಸೆಬಿಯಿಂದ ತನಿಖೆಯನ್ನು ಎಸ್‌ಐಟಿಗೆ ವರ್ಗಾಯಿಸುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌, ಕಳೆದ ವರ್ಷ ನವೆಂಬರ್ 24ರಂದು ಆದೇಶ ಕಾಯ್ದಿರಿಸಿತ್ತು.

ಇದನ್ನೂ ಓದಿ: ಗ್ಯಾರಂಟಿ ಪ್ರಶ್ನಿಸಿ ಅರ್ಜಿ: ವಿಚಾರಣೆ 3 ತಿಂಗಳು ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...