Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...