Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...