Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...