Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...