Homeಮುಖಪುಟ2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

- Advertisement -
- Advertisement -

2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ ಬೇರೆ ವಿಧಾನಗಳ ಮೂಲಕ ತರಂಗಾಂತರ ಹಂಚಿಕೆ ಮಾಡುವುದನ್ನು ತೀರ್ಪು ತಡೆಯುತ್ತದೆಯೇ? ಎಂದು ಕೇಂದ್ರ ಸರ್ಕಾರ ಸ್ಪಷ್ಟೀಕರಣ ಕೋರಿತ್ತು.

ಸ್ಪಷ್ಟೀಕರಣ ಪಡೆಯುವ ನೆಪದಲ್ಲಿ 2012ರ ತೀರ್ಪಿನ ‘ಮರುಪರಿಶೀಲನೆಗೆ’ ಕೋರಲಾಗಿದೆ ಎಂದು ತಿಳಿಸಿದ ರಿಜಿಸ್ಟ್ರಾರ್, ಅರ್ಜಿ ‘ತಪ್ಪು ಕಲ್ಪನೆ’ಯಿಂದ ಕೂಡಿದೆ ಎಂದು ಹೇಳುವ ಮೂಲಕ ತಿರಸ್ಕರಿಸಿದ್ದಾರೆ. “ಅರ್ಜಿ ಸಲ್ಲಿಸಿದ್ದಕ್ಕೆ ಯಾವುದೇ ಸಮಂಜಸವಾದ ಕಾರಣಗಳಿಲ್ಲ. ಮನರಂಜನೆಗಾಗಿ ಸಲ್ಲಿಸಿದಂತಿದೆ” ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಯಮಗಳು, 2013 ರ ಆದೇಶ XVನಿಯಮ 5ರ ನಿಬಂಧನೆಗಳ ಪ್ರಕಾರ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಈ ನಿಬಂಧನೆಯ ಪ್ರಕಾರ, ರಿಜಿಸ್ಟ್ರಾರ್ ಯಾವುದೇ ಸಮಂಜಸವಾದ ಕಾರಣ ಬಹಿರಂಗಪಡಿಸದ ಅಥವಾ ಕ್ಷುಲ್ಲಕ ವಿಷಯವನ್ನು ಒಳಗೊಂಡಿರುವ ಆಧಾರದ ಮೇಲೆ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಬಹುದು. ಆದರೆ, ಅರ್ಜಿದಾರರು ರಿಜಿಸ್ಟ್ರಾರ್‌ ಅರ್ಜಿ ತಿರಸ್ಕರಿಸಿದ ಹದಿನೈದು ದಿನಗಳೊಳಗೆ ಮೇಲ್ಮನವಿ ಸಲ್ಲಿಸಬಹುದು. ಆದ್ದರಿಂದ, ರಿಜಿಸ್ಟ್ರಾರ್ ಅರ್ಜಿ ತಿರಸ್ಕಸಿರುವುದರ ವಿರುದ್ಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೇಂದ್ರಕ್ಕೆ ಅವಕಾಶವಿದೆ.

ಅರ್ಜಿ ಸಲ್ಲಿಸುವಲ್ಲಿ ಸುಮಾರು 12 ವರ್ಷಗಳ ಸಮಯದ ಅಂತರವನ್ನು ಕೂಡ ರಿಜಿಸ್ಟ್ರಾರ್ ಉಲ್ಲೇಖಿಸಿದ್ದಾರೆ. ಮೇ 10, 2012 ರಂದು ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಸ್ವತಃ ಕೇಂದ್ರ ಸರ್ಕಾರ ಹಿಂಪಡೆದಿರುವುದನ್ನು ಗಮನಕ್ಕೆ ತಂದಿದ್ದಾರೆ.

ಈ ಹಿಂದೆ ಸಲ್ಲಿಸಿದಂತೆಯೇ, ಸುದೀರ್ಘ ಸಮಯದ ಬಳಿಕ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಮೂಲಕ ಮುಕ್ತ ನ್ಯಾಯಾಲಯದಲ್ಲಿ ಪ್ರಕರಣದ ಮರು ವಿಚಾರಣೆಗೆ ಅರ್ಜಿದಾರರು ಪ್ರಯತ್ನಿಸಿದ್ದಾರೆ ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ.

ಫೆಬ್ರವರಿ 2012ರಲ್ಲಿ ನೀಡಿದ 2ಜಿ ತರಂಗಾತರ ಹಂಚಿಕೆ ಪ್ರಕರಣದ ತೀರ್ಪಿನಲ್ಲಿ (ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ) ಸುಪ್ರೀಂ ಕೋರ್ಟ್ 2ಜಿ ತರಂಗಾಂತರ ಹಂಚಿಕೆ ವೇಳೆ ಮೊದಲು ಬಂದವರಿಗೆ ಮೊದಲ ಆದ್ಯತೆ (ಎಫ್‌ಸಿಎಫ್‌ಎಸ್) ಎಂಬ ನಿಯಮವನ್ನು ಬದಿಗಿರಿಸಿತ್ತು. ತರಂಗಾಂತರದಂತಹ ಸಾರ್ವಜನಿಕ ಸಂಪನ್ಮೂಲಗಳ ಹಂಚಿಕೆಗೆ ಸಾರ್ವಜನಿಕ ಹರಾಜು ಆದ್ಯತೆಯ ವಿಧಾನವಾಗಿರಬೇಕು ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಭದ್ರತೆ, ಸುರಕ್ಷತೆ, ವಿಪತ್ತು ಸೇರಿದಂತೆ ಸಾರ್ವಭೌಮ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ವಾಣಿಜ್ಯೇತರ ಉದ್ದೇಶಗಳಿಗಾಗಿ ಹರಾಜಿನಿಂದ ವಿನಾಯಿತಿ ಕೋರಿತ್ತು.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...