Homeಮುಖಪುಟ2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

- Advertisement -
- Advertisement -

2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ ಬೇರೆ ವಿಧಾನಗಳ ಮೂಲಕ ತರಂಗಾಂತರ ಹಂಚಿಕೆ ಮಾಡುವುದನ್ನು ತೀರ್ಪು ತಡೆಯುತ್ತದೆಯೇ? ಎಂದು ಕೇಂದ್ರ ಸರ್ಕಾರ ಸ್ಪಷ್ಟೀಕರಣ ಕೋರಿತ್ತು.

ಸ್ಪಷ್ಟೀಕರಣ ಪಡೆಯುವ ನೆಪದಲ್ಲಿ 2012ರ ತೀರ್ಪಿನ ‘ಮರುಪರಿಶೀಲನೆಗೆ’ ಕೋರಲಾಗಿದೆ ಎಂದು ತಿಳಿಸಿದ ರಿಜಿಸ್ಟ್ರಾರ್, ಅರ್ಜಿ ‘ತಪ್ಪು ಕಲ್ಪನೆ’ಯಿಂದ ಕೂಡಿದೆ ಎಂದು ಹೇಳುವ ಮೂಲಕ ತಿರಸ್ಕರಿಸಿದ್ದಾರೆ. “ಅರ್ಜಿ ಸಲ್ಲಿಸಿದ್ದಕ್ಕೆ ಯಾವುದೇ ಸಮಂಜಸವಾದ ಕಾರಣಗಳಿಲ್ಲ. ಮನರಂಜನೆಗಾಗಿ ಸಲ್ಲಿಸಿದಂತಿದೆ” ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಯಮಗಳು, 2013 ರ ಆದೇಶ XVನಿಯಮ 5ರ ನಿಬಂಧನೆಗಳ ಪ್ರಕಾರ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಈ ನಿಬಂಧನೆಯ ಪ್ರಕಾರ, ರಿಜಿಸ್ಟ್ರಾರ್ ಯಾವುದೇ ಸಮಂಜಸವಾದ ಕಾರಣ ಬಹಿರಂಗಪಡಿಸದ ಅಥವಾ ಕ್ಷುಲ್ಲಕ ವಿಷಯವನ್ನು ಒಳಗೊಂಡಿರುವ ಆಧಾರದ ಮೇಲೆ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಬಹುದು. ಆದರೆ, ಅರ್ಜಿದಾರರು ರಿಜಿಸ್ಟ್ರಾರ್‌ ಅರ್ಜಿ ತಿರಸ್ಕರಿಸಿದ ಹದಿನೈದು ದಿನಗಳೊಳಗೆ ಮೇಲ್ಮನವಿ ಸಲ್ಲಿಸಬಹುದು. ಆದ್ದರಿಂದ, ರಿಜಿಸ್ಟ್ರಾರ್ ಅರ್ಜಿ ತಿರಸ್ಕಸಿರುವುದರ ವಿರುದ್ಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೇಂದ್ರಕ್ಕೆ ಅವಕಾಶವಿದೆ.

ಅರ್ಜಿ ಸಲ್ಲಿಸುವಲ್ಲಿ ಸುಮಾರು 12 ವರ್ಷಗಳ ಸಮಯದ ಅಂತರವನ್ನು ಕೂಡ ರಿಜಿಸ್ಟ್ರಾರ್ ಉಲ್ಲೇಖಿಸಿದ್ದಾರೆ. ಮೇ 10, 2012 ರಂದು ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಸ್ವತಃ ಕೇಂದ್ರ ಸರ್ಕಾರ ಹಿಂಪಡೆದಿರುವುದನ್ನು ಗಮನಕ್ಕೆ ತಂದಿದ್ದಾರೆ.

ಈ ಹಿಂದೆ ಸಲ್ಲಿಸಿದಂತೆಯೇ, ಸುದೀರ್ಘ ಸಮಯದ ಬಳಿಕ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಮೂಲಕ ಮುಕ್ತ ನ್ಯಾಯಾಲಯದಲ್ಲಿ ಪ್ರಕರಣದ ಮರು ವಿಚಾರಣೆಗೆ ಅರ್ಜಿದಾರರು ಪ್ರಯತ್ನಿಸಿದ್ದಾರೆ ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ.

ಫೆಬ್ರವರಿ 2012ರಲ್ಲಿ ನೀಡಿದ 2ಜಿ ತರಂಗಾತರ ಹಂಚಿಕೆ ಪ್ರಕರಣದ ತೀರ್ಪಿನಲ್ಲಿ (ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ) ಸುಪ್ರೀಂ ಕೋರ್ಟ್ 2ಜಿ ತರಂಗಾಂತರ ಹಂಚಿಕೆ ವೇಳೆ ಮೊದಲು ಬಂದವರಿಗೆ ಮೊದಲ ಆದ್ಯತೆ (ಎಫ್‌ಸಿಎಫ್‌ಎಸ್) ಎಂಬ ನಿಯಮವನ್ನು ಬದಿಗಿರಿಸಿತ್ತು. ತರಂಗಾಂತರದಂತಹ ಸಾರ್ವಜನಿಕ ಸಂಪನ್ಮೂಲಗಳ ಹಂಚಿಕೆಗೆ ಸಾರ್ವಜನಿಕ ಹರಾಜು ಆದ್ಯತೆಯ ವಿಧಾನವಾಗಿರಬೇಕು ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಭದ್ರತೆ, ಸುರಕ್ಷತೆ, ವಿಪತ್ತು ಸೇರಿದಂತೆ ಸಾರ್ವಭೌಮ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ವಾಣಿಜ್ಯೇತರ ಉದ್ದೇಶಗಳಿಗಾಗಿ ಹರಾಜಿನಿಂದ ವಿನಾಯಿತಿ ಕೋರಿತ್ತು.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...