Homeಮುಖಪುಟ2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

- Advertisement -
- Advertisement -

2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ ಬೇರೆ ವಿಧಾನಗಳ ಮೂಲಕ ತರಂಗಾಂತರ ಹಂಚಿಕೆ ಮಾಡುವುದನ್ನು ತೀರ್ಪು ತಡೆಯುತ್ತದೆಯೇ? ಎಂದು ಕೇಂದ್ರ ಸರ್ಕಾರ ಸ್ಪಷ್ಟೀಕರಣ ಕೋರಿತ್ತು.

ಸ್ಪಷ್ಟೀಕರಣ ಪಡೆಯುವ ನೆಪದಲ್ಲಿ 2012ರ ತೀರ್ಪಿನ ‘ಮರುಪರಿಶೀಲನೆಗೆ’ ಕೋರಲಾಗಿದೆ ಎಂದು ತಿಳಿಸಿದ ರಿಜಿಸ್ಟ್ರಾರ್, ಅರ್ಜಿ ‘ತಪ್ಪು ಕಲ್ಪನೆ’ಯಿಂದ ಕೂಡಿದೆ ಎಂದು ಹೇಳುವ ಮೂಲಕ ತಿರಸ್ಕರಿಸಿದ್ದಾರೆ. “ಅರ್ಜಿ ಸಲ್ಲಿಸಿದ್ದಕ್ಕೆ ಯಾವುದೇ ಸಮಂಜಸವಾದ ಕಾರಣಗಳಿಲ್ಲ. ಮನರಂಜನೆಗಾಗಿ ಸಲ್ಲಿಸಿದಂತಿದೆ” ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಯಮಗಳು, 2013 ರ ಆದೇಶ XVನಿಯಮ 5ರ ನಿಬಂಧನೆಗಳ ಪ್ರಕಾರ ಅರ್ಜಿ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಲೈವ್‌ ಲಾ ವರದಿ ಮಾಡಿದೆ.

ಈ ನಿಬಂಧನೆಯ ಪ್ರಕಾರ, ರಿಜಿಸ್ಟ್ರಾರ್ ಯಾವುದೇ ಸಮಂಜಸವಾದ ಕಾರಣ ಬಹಿರಂಗಪಡಿಸದ ಅಥವಾ ಕ್ಷುಲ್ಲಕ ವಿಷಯವನ್ನು ಒಳಗೊಂಡಿರುವ ಆಧಾರದ ಮೇಲೆ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಬಹುದು. ಆದರೆ, ಅರ್ಜಿದಾರರು ರಿಜಿಸ್ಟ್ರಾರ್‌ ಅರ್ಜಿ ತಿರಸ್ಕರಿಸಿದ ಹದಿನೈದು ದಿನಗಳೊಳಗೆ ಮೇಲ್ಮನವಿ ಸಲ್ಲಿಸಬಹುದು. ಆದ್ದರಿಂದ, ರಿಜಿಸ್ಟ್ರಾರ್ ಅರ್ಜಿ ತಿರಸ್ಕಸಿರುವುದರ ವಿರುದ್ಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೇಂದ್ರಕ್ಕೆ ಅವಕಾಶವಿದೆ.

ಅರ್ಜಿ ಸಲ್ಲಿಸುವಲ್ಲಿ ಸುಮಾರು 12 ವರ್ಷಗಳ ಸಮಯದ ಅಂತರವನ್ನು ಕೂಡ ರಿಜಿಸ್ಟ್ರಾರ್ ಉಲ್ಲೇಖಿಸಿದ್ದಾರೆ. ಮೇ 10, 2012 ರಂದು ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಸ್ವತಃ ಕೇಂದ್ರ ಸರ್ಕಾರ ಹಿಂಪಡೆದಿರುವುದನ್ನು ಗಮನಕ್ಕೆ ತಂದಿದ್ದಾರೆ.

ಈ ಹಿಂದೆ ಸಲ್ಲಿಸಿದಂತೆಯೇ, ಸುದೀರ್ಘ ಸಮಯದ ಬಳಿಕ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಮೂಲಕ ಮುಕ್ತ ನ್ಯಾಯಾಲಯದಲ್ಲಿ ಪ್ರಕರಣದ ಮರು ವಿಚಾರಣೆಗೆ ಅರ್ಜಿದಾರರು ಪ್ರಯತ್ನಿಸಿದ್ದಾರೆ ಎಂದು ರಿಜಿಸ್ಟ್ರಾರ್ ಹೇಳಿದ್ದಾರೆ.

ಫೆಬ್ರವರಿ 2012ರಲ್ಲಿ ನೀಡಿದ 2ಜಿ ತರಂಗಾತರ ಹಂಚಿಕೆ ಪ್ರಕರಣದ ತೀರ್ಪಿನಲ್ಲಿ (ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ) ಸುಪ್ರೀಂ ಕೋರ್ಟ್ 2ಜಿ ತರಂಗಾಂತರ ಹಂಚಿಕೆ ವೇಳೆ ಮೊದಲು ಬಂದವರಿಗೆ ಮೊದಲ ಆದ್ಯತೆ (ಎಫ್‌ಸಿಎಫ್‌ಎಸ್) ಎಂಬ ನಿಯಮವನ್ನು ಬದಿಗಿರಿಸಿತ್ತು. ತರಂಗಾಂತರದಂತಹ ಸಾರ್ವಜನಿಕ ಸಂಪನ್ಮೂಲಗಳ ಹಂಚಿಕೆಗೆ ಸಾರ್ವಜನಿಕ ಹರಾಜು ಆದ್ಯತೆಯ ವಿಧಾನವಾಗಿರಬೇಕು ಎಂದು ಹೇಳಿತ್ತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ, ಭದ್ರತೆ, ಸುರಕ್ಷತೆ, ವಿಪತ್ತು ಸೇರಿದಂತೆ ಸಾರ್ವಭೌಮ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ವಾಣಿಜ್ಯೇತರ ಉದ್ದೇಶಗಳಿಗಾಗಿ ಹರಾಜಿನಿಂದ ವಿನಾಯಿತಿ ಕೋರಿತ್ತು.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...