Homeಮುಖಪುಟಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ

ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ

- Advertisement -
- Advertisement -

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದಾಗಿನಿಂದ ಬಂಧನದಲ್ಲಿಯೇ ಇದ್ದಾರೆ.

ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಕೈಗೆತ್ತಿಕೊಂಡಿದ್ದು, ಆರರಿಂದ ಎಂಟು ತಿಂಗಳಲ್ಲಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ಸೂಚಿಸಿದೆ. ವಿಚಾರಣೆ ನಿಧಾನಗತಿಯಲ್ಲಿ ಮುಂದುವರಿದರೆ, ನಂತರದ ಹಂತದಲ್ಲಿ ಸಿಸೋಡಿಯಾ ಜಾಮೀನಿಗೆ ಮರು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯನ್ನು ತಿರುಚಲು ಹಣ ಪಾವತಿಸಲಾಗಿದೆ ಎಂದು ಹೇಳಲಾದ ಲಂಚವು ಪೂರ್ವಾಪೇಕ್ಷಿತ ಅಪರಾಧದ ಭಾಗವಾಗಿಲ್ಲದಿದ್ದರೆ, ಸಿಸೋಡಿಯಾ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸಾಬೀತುಪಡಿಸುವುದು ಕಷ್ಟ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದೆ.

”ಲಂಚ ನೀಡಲಾಗುತ್ತಿದೆ ಎಂಬ ಊಹೆಯ ಆಧಾರದ ಮೇಲೆ ಪ್ರಕರಣವನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ಅದು ಸಿಬಿಐಗೆ ತಿಳಿಸಿದೆ.

ಸಿಬಿಐನಿಂದ ಬಂಧನಕ್ಕೊಳಗಾದ ನಂತರ, ಇಡಿ ಅಧಿಕಾರಿಗಳು ತಿಹಾರ್ ಜೈಲಿನಲ್ಲಿ ಸಿಸೋಡಿಯಾ ಅವರನ್ನು  ಪ್ರಶ್ನಿಸಿದ್ದರು. ಆ ನಂತರ ಇಡಿ ಅಧಿಕಾರಿಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರನ್ನು ತಮ್ಮ ಕಸ್ಟಡಿಗೆ ತೆಗೆದುಕೊಂಡರು.

ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ-ಲಾಂಡರಿಂಗ್ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಈ ಹಿಂದೆ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು, ಅವರ ವಿರುದ್ಧದ ಆರೋಪಗಳು ಬಹಳ ಗಂಭೀರವಾಗಿದೆ ಎಂದು ಹೇಳಿದ್ದರು.

ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಹೊಂದಿರುವ ‘ಉನ್ನತ’ ವ್ಯಕ್ತಿ ಎಂದು ಮೇ 30 ರಂದು ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಇದನ್ನೂ ಓದಿ: ಕೊಚ್ಚಿ ಸ್ಫೋಟ: ಕೇಂದ್ರ ಸಚಿವರ ‘ಕೋಮುವಾದಿ’ ಹೇಳಿಕೆಗೆ ಪಿಣರಾಯಿ ವಿಜಯನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...